Jun 16, 2020, 2:54 PM IST
ಬೆಂಗಳೂರು (ಜೂ. 16): ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಹೇರುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಜತೆಗೆ ಹಾಲಿ ಇರುವ ಲಾಕ್ಡೌನ್ ನಿಯಮಗಳನ್ನು ಸಡಿಲಿಸಬೇಕಿದೆ. ಈ ಸಂಬಂಧ ಪ್ರಧಾನಿ ಮೋದಿ ಅವರೊಂದಿಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಮನವಿ ಮಾಡುತ್ತೇನೆ' ಎಂದಿದ್ದಾರೆ. ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಹೇರುವುದಿಲ್ಲ. ಕೊರೊನಾ ಸ್ಥಿತಿ ನಿಯಂತ್ರಣದಲ್ಲಿದೆ. ಹಾಗಾಗಿ ಲಾಕ್ಡೌನ್ ನಿಯಮಾವಳಿಯನ್ನು ಇನ್ನಷ್ಟು ಸಡಿಲಿಸಬೇಕಿದೆ. ಈ ಬಗ್ಗೆ ಮೋದಿಯವರಲ್ಲಿ ಮನವಿ ಮಾಡುತ್ತೇನೆ' ಎಂದಿದ್ದಾರೆ.