'ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ಕೊಡಲು ಸಿಎಂಗೆ ಮನಸ್ಸಿದೆ, ತಾಳ್ಮೆ ಕಳೆದುಕೊಳ್ಳಬೇಡಿ'

Feb 9, 2021, 3:00 PM IST

ಬೆಂಗಳೂರು (ಫೆ. )9): ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ಕೊಡಲು ಸಿಎಂಗೆ ಮನಸ್ಸಿದೆ. ನಾವು ಅದನ್ನು ಮಾಡೋಣ ಅಂತ ಸಿಎಂ ಹೇಳಿದ್ದಾರೆ. ಹಾಗಾಗಿ ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ  ಎಂದು ಸಚಿವ ಶ್ರೀರಾಮುಲು ದಾವಣಗೆರೆಯಲ್ಲಿಂದು ಹೇಳಿದ್ದಾರೆ. 

ಚುನಾವಣೆ ಕಣದಿಂದ ಕೈ ಹಿಂದಕ್ಕೆ: ಬಸವರಾಜ ಹೊರಟ್ಟು ಅವಿರೋಧ ಆಯ್ಕೆ

ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಇಂದು ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ವಾಲ್ಮೀಕಿ ಪೀಠದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ರಥೋತ್ಸವ ನಡೆಯುತ್ತಿದ್ದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದಾರೆ. ಈ ವೇಳೆ ಸಚಿವ ಶ್ರೀರಾಮುಲು ಮಾಧ್ಯಮದ ಜೊತೆ ಮಾತನಾಡಿದ್ದಾರೆ.