ನಿಮ್ಮ ಕೆಲಸಗಳು ಮತ್ತೆ ಆರಂಭವಾಗುತ್ತೆ, ಊರುಗಳಿಗೆ ಹಿಂತಿರುಗಬೇಡಿ: ಸಿಎಂ ಮನವಿ

May 5, 2020, 3:57 PM IST

ಬೆಂಗಳೂರು (ಮೇ. 05): 'ಕಾರ್ಮಿಕರಿಗೆ ಉದ್ಯೋಗ ಒದಗಿಸಿ ಕೊಟ್ಟಿದ್ದೇವೆ. ಅವರಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಯನ್ನೂ ಮಾಡುತ್ತೇವೆ. ನೀವು ಎಲ್ಲೆಲ್ಲಿ ಕೆಲಸ ಮಾಡುತ್ತಿದ್ದಿರೋ ಅಲ್ಲೆಲ್ಲಾ ನಿಮಗೆ ಸೂಕ್ತ ಸೌಕರ್ಯ ಒದಗಿಸಿ ಕೊಡುವ ಜವಾಬ್ದಾರಿ ಸರ್ಕಾರದ್ದಿದೆ. ನಾವು ಕೈಗಾರಿಕೋದ್ಯಮಿಗಳ ಜೊತೆ ಮಾತನಾಡಿದ್ದೇವೆ. ಯಾರೂ ಕೂಡಾ ನಿಮ್ಮ ನಿಮ್ಮ ಊರುಗಳಿಗೆ ಹೋಗುವ ಪ್ರಯತ್ನ ಮಾಡಬೇಡಿ. ಇಲ್ಲಿಯೇ ಉಳಿದು ನಿಮ್ಮ ನಿಮ್ಮ ಕೆಲಸಗಳನ್ನು ಹಿಂದಿನಂತೆಯೇ ಮುಂದುವರೆಸಬೇಕು. ನಿಮಗೇನೇ ತೊಂದರೆ ಇದ್ದರೂ ಅದನ್ನು ಬಗೆಹರಿಸುವ ಭರವಸೆ ನೀಡುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಮಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಕೊರೋನಾ ಸೋಂಕಿತ ಪೊಲೀಸ್ ಪೇದೆಯ ಟ್ರಾವೆಲ್ ಹಿಸ್ಟ್ರಿಯೇ ಭಯಾನಕ..!