Weekend Curfew:ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ: ಸಿಎಂ ಭರವಸೆ

Weekend Curfew:ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ: ಸಿಎಂ ಭರವಸೆ

Published : Jan 21, 2022, 11:57 AM ISTUpdated : Jan 21, 2022, 12:06 PM IST

ಕೋವಿಡ್‌ ಸೋಂಕು (CoronaVirus) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend curfew) ಮತ್ತು ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.
 

ಬೆಂಗಳೂರು (ಜ. 21): ಕೋವಿಡ್‌ ಸೋಂಕು (CoronaVirus) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend curfew) ಮತ್ತು ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

ವಾರಾಂತ್ಯ ಕರ್ಫ್ಯೂ (Weekend Curfew) ಬಗ್ಗೆ ವಿವಿಧ ಸಂಘ ಸಂಸ್ಥೆಗಳಲ್ಲದೆ ಆಡಳಿತಾರೂಢ ಪಕ್ಷದ ಹಿರಿಯ ನಾಯಕರಿಂದಲೂ ಅಪಸ್ವರ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಹುತೇಕ ಕೆಲವು ಬಿಗಿ ಕ್ರಮಗಳೊಂದಿಗೆ  ಕರ್ಫ್ಯೂ ಸಡಿಲಗೊಳಿಸುವ ಸಾಧ್ಯತೆಯೇ ಹೆಚ್ಚಿದೆ ಎನ್ನಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಇಂದು  ಮಧ್ಯಾಹ್ನ 1 ಗಂಟೆಗೆ ನಡೆಯುವ ಸಭೆಯಲ್ಲಿ ಬೊಮ್ಮಾಯಿ ಸೇರಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಕಂದಾಯ ಸಚಿವ ಆರ್‌.ಅಶೋಕ್‌, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೇರಿದಂತೆ ಇತರೆ ಸಚಿವರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. 

'ಹಲವಾರು ಸಂಘ ಸಂಸ್ಥೆಗಳು ವ್ಯಾಪಾರ ವಹಿವಾಟಿನ ಬಗ್ಗೆ ಮಾತನಾಡಿದ್ದಾರೆ. ತಜ್ಞರು ಆರೋಗ್ಯದ ದೃಷ್ಟಿಯಿಂದ ವರದಿ ನೀಡಿದ್ದಾರೆ. ಇವೆಲ್ಲಾ ನೋಡಿಕೊಂಡು ಚರ್ಚೆ ಮಾಡಲಿದ್ದೇವೆ. ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಸಿಎಂ ಭರವಸೆ ನೀಡಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more