ಸಿದ್ಧರಾಮಯ್ಯ 'ಯುದ್ಧ ಬೇಡ' ಹೇಳಿಕೆ ಪಾಕಿಸ್ತಾನದಲ್ಲಿ ಟ್ರೆಂಡ್; ನಾನು ಹೇಳಿದ್ದು ಹಂಗಲ್ಲ ಎಂದ ಸಿಎಂ!

ಸಿದ್ಧರಾಮಯ್ಯ 'ಯುದ್ಧ ಬೇಡ' ಹೇಳಿಕೆ ಪಾಕಿಸ್ತಾನದಲ್ಲಿ ಟ್ರೆಂಡ್; ನಾನು ಹೇಳಿದ್ದು ಹಂಗಲ್ಲ ಎಂದ ಸಿಎಂ!

Published : Apr 28, 2025, 02:41 PM ISTUpdated : Apr 28, 2025, 02:52 PM IST

ಪಾಕಿಸ್ತಾನ ಬೆಂಬಲಿತ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತದ ಯುದ್ಧದ ಸಿದ್ಧತೆಯ ನಡುವೆ, ಸಿಎಂ ಸಿದ್ದರಾಮಯ್ಯ ಅವರು ಯುದ್ಧವೊಂದೇ ಪರಿಹಾರವಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆ ಪಾಕಿಸ್ತಾನದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿಯೇ ಯುದ್ಧ ವಿರೋಧಿ ಭಾವನೆ ಇದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ಬೆಂಗಳೂರು (ಏ.28): ಪಾಕ್ ಬೆಂಬಲಿಕ ಇಸ್ಲಾಮಿಕ್ ಉಗ್ರರು ಭಾರತದ ಕಾಶ್ಮೀರದೊಳಗೆ ನುಗ್ಗಿ 26 ಹಿಂದೂ ಪ್ರವಾಸಿಗರ ಮಾರಣಹೋಮ ಮಾಡಿದ್ದಾರೆ. ಇದೀಗ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಲು ಸಿದ್ಧವಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು 'ಪಾಕಿಸ್ತಾನದ ಮೇಲೆ ಯುದ್ಧ ಮಾಡುವುದೊಂದೇ ಪರಿಹಾರವಲ್ಲ' ಎಂದು ಹೇಳುವ ಮೂಲಕ ಯುದ್ಧೋನ್ಮಾದಕ್ಕೆ ತಣ್ಣೀರೆರಚಿದ್ದಾರೆ.

ಜಾಗತಿಕ ಮಟ್ಟದಲ್ಲಿ ದೊಡ್ಡ ಪಿಡುಗು ಆಗಿ ಕಾಡುತ್ತಿರುವ ಉಗ್ರರಿಗೆ ಬೆಂಬಲ ಕೊಟ್ಟಿರುವ ಪಾಕ್, ಭಾರತದ ಮೇಲಾಗಿರುವ ದಾಳಿಯನ್ನು ಈವರೆಗೂ ಖಂಡನೆ ಮಾಡಿಲ್ಲ. ಇದೀಗ ಪಾಕ್ ನೆಲದಲ್ಲಿ ಅಡಗಿರುವ ಉಗ್ರರ ವಿರುದ್ಧ ಭಾರತ ದಾಳಿ ಮಾಡುವ ಎಚ್ಚರಿಕೆ ನೀಡಿದೆ. ಇದರಿಂದ ಬೆಚ್ಚಿದ ಪಾಕಿಸ್ತಾನ ನಾವು ಕೂಡ ಭಾರತದ ಮೇಲೆ ಪರಮಾಣು ಬಾಂಬ್ ಹಾಕ್ತೇವೆ ಎಂದು ಪಾಕ್ ಸಚಿವರು, ಮಂತ್ರಿಗಳು ಹಾಗೂ ಸೇನಾಪಡೆ ಮುಖ್ಯಸ್ಥರು ಬಾಯಿಗೆ ಬಂದಂತೆ ಹೇಳಿಕೆ ಕೊಡುತ್ತಿದ್ದಾರೆ. ಪಾಕಿಸ್ತಾನದಲ್ಲಿ ಜನರಿಗೆ ಊಟಕ್ಕೂ ಪರದಾಡುವ ಸ್ಥಿತಿ ಇದ್ದು, ಆರ್ಥಿಕ ಸ್ಥಿತಿ ಮಕಾಡೆ ಮಲಗಿದೆ. ಹೀಗಿದ್ದರೂ ಭಾರತವನ್ನು ಹೊಡೆದುರುಳಿಸುತ್ತೇವೆ ಎಂದು ಹೇಳುತ್ತಿರುವ ಪಾಕ್ ವಿರುದ್ಧ ಯುದ್ಧ ಬೇಡ ಎಂದು ಹೇಳಿರುವ ಸಿದ್ದರಾಮಯ್ಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಪಾಕಿಸ್ತಾನದ ಮೇಲೆ ಯುದ್ಧ ಬೇಡ ಎಂದು ಹೇಳಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೇಳಿಕೆ ಪಾಕಿಸ್ತಾನದಲ್ಲಿ ಭಾರೀ ವೈರಲ್ ಆಗಿದೆ. ಅಲ್ಲಿನ ಮಾಧ್ಯಮಗಳು ಭಾರತದಲ್ಲಿಯೇ ಪಾಕ್ ವಿರುದ್ಧ ಯುದ್ಧಕ್ಕೆ ವೊರೋಧವಿದೆ ಎಂದು ಸುದ್ದಿ ಪ್ರಸಾರ ಮಾಡುತ್ತಿವೆ. ಇದನ್ನು ನೋಡಿದ ವಿಪಕ್ಷ ನಾಯಕರು ಸಿದ್ದರಾಮಯ್ಯನನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯ ನಮ್ಮ ದೇಶದ ಐಕ್ಯತೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಆದರೆ, ಇದೀಗ ಸಿಎಂ ಸಿದ್ದರಾಮಯ್ಯ ನಾನು ಹೇಳಿರುವುದು ಹಾಗಲ್ಲ. ಪಾಕ್ ಮೇಲೆ ಯುದ್ಧ ಒಂದೇ ಪರಿಹಾರವಲ್ಲ. ಒಂದು ವೇಳೆ ಯುದ್ಧ ಅನಿವಾರ್ಯವಾದರೆ ಮಾಡಲಿ ಎಂದು ಹೇಳಿದ್ದಾರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more