ಸಿದ್ಧರಾಮಯ್ಯ 'ಯುದ್ಧ ಬೇಡ' ಹೇಳಿಕೆ ಪಾಕಿಸ್ತಾನದಲ್ಲಿ ಟ್ರೆಂಡ್; ನಾನು ಹೇಳಿದ್ದು ಹಂಗಲ್ಲ ಎಂದ ಸಿಎಂ!

ಸಿದ್ಧರಾಮಯ್ಯ 'ಯುದ್ಧ ಬೇಡ' ಹೇಳಿಕೆ ಪಾಕಿಸ್ತಾನದಲ್ಲಿ ಟ್ರೆಂಡ್; ನಾನು ಹೇಳಿದ್ದು ಹಂಗಲ್ಲ ಎಂದ ಸಿಎಂ!

Published : Apr 28, 2025, 02:41 PM ISTUpdated : Apr 28, 2025, 02:52 PM IST

ಪಾಕಿಸ್ತಾನ ಬೆಂಬಲಿತ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತದ ಯುದ್ಧದ ಸಿದ್ಧತೆಯ ನಡುವೆ, ಸಿಎಂ ಸಿದ್ದರಾಮಯ್ಯ ಅವರು ಯುದ್ಧವೊಂದೇ ಪರಿಹಾರವಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆ ಪಾಕಿಸ್ತಾನದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿಯೇ ಯುದ್ಧ ವಿರೋಧಿ ಭಾವನೆ ಇದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ಬೆಂಗಳೂರು (ಏ.28): ಪಾಕ್ ಬೆಂಬಲಿಕ ಇಸ್ಲಾಮಿಕ್ ಉಗ್ರರು ಭಾರತದ ಕಾಶ್ಮೀರದೊಳಗೆ ನುಗ್ಗಿ 26 ಹಿಂದೂ ಪ್ರವಾಸಿಗರ ಮಾರಣಹೋಮ ಮಾಡಿದ್ದಾರೆ. ಇದೀಗ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಲು ಸಿದ್ಧವಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು 'ಪಾಕಿಸ್ತಾನದ ಮೇಲೆ ಯುದ್ಧ ಮಾಡುವುದೊಂದೇ ಪರಿಹಾರವಲ್ಲ' ಎಂದು ಹೇಳುವ ಮೂಲಕ ಯುದ್ಧೋನ್ಮಾದಕ್ಕೆ ತಣ್ಣೀರೆರಚಿದ್ದಾರೆ.

ಜಾಗತಿಕ ಮಟ್ಟದಲ್ಲಿ ದೊಡ್ಡ ಪಿಡುಗು ಆಗಿ ಕಾಡುತ್ತಿರುವ ಉಗ್ರರಿಗೆ ಬೆಂಬಲ ಕೊಟ್ಟಿರುವ ಪಾಕ್, ಭಾರತದ ಮೇಲಾಗಿರುವ ದಾಳಿಯನ್ನು ಈವರೆಗೂ ಖಂಡನೆ ಮಾಡಿಲ್ಲ. ಇದೀಗ ಪಾಕ್ ನೆಲದಲ್ಲಿ ಅಡಗಿರುವ ಉಗ್ರರ ವಿರುದ್ಧ ಭಾರತ ದಾಳಿ ಮಾಡುವ ಎಚ್ಚರಿಕೆ ನೀಡಿದೆ. ಇದರಿಂದ ಬೆಚ್ಚಿದ ಪಾಕಿಸ್ತಾನ ನಾವು ಕೂಡ ಭಾರತದ ಮೇಲೆ ಪರಮಾಣು ಬಾಂಬ್ ಹಾಕ್ತೇವೆ ಎಂದು ಪಾಕ್ ಸಚಿವರು, ಮಂತ್ರಿಗಳು ಹಾಗೂ ಸೇನಾಪಡೆ ಮುಖ್ಯಸ್ಥರು ಬಾಯಿಗೆ ಬಂದಂತೆ ಹೇಳಿಕೆ ಕೊಡುತ್ತಿದ್ದಾರೆ. ಪಾಕಿಸ್ತಾನದಲ್ಲಿ ಜನರಿಗೆ ಊಟಕ್ಕೂ ಪರದಾಡುವ ಸ್ಥಿತಿ ಇದ್ದು, ಆರ್ಥಿಕ ಸ್ಥಿತಿ ಮಕಾಡೆ ಮಲಗಿದೆ. ಹೀಗಿದ್ದರೂ ಭಾರತವನ್ನು ಹೊಡೆದುರುಳಿಸುತ್ತೇವೆ ಎಂದು ಹೇಳುತ್ತಿರುವ ಪಾಕ್ ವಿರುದ್ಧ ಯುದ್ಧ ಬೇಡ ಎಂದು ಹೇಳಿರುವ ಸಿದ್ದರಾಮಯ್ಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಪಾಕಿಸ್ತಾನದ ಮೇಲೆ ಯುದ್ಧ ಬೇಡ ಎಂದು ಹೇಳಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೇಳಿಕೆ ಪಾಕಿಸ್ತಾನದಲ್ಲಿ ಭಾರೀ ವೈರಲ್ ಆಗಿದೆ. ಅಲ್ಲಿನ ಮಾಧ್ಯಮಗಳು ಭಾರತದಲ್ಲಿಯೇ ಪಾಕ್ ವಿರುದ್ಧ ಯುದ್ಧಕ್ಕೆ ವೊರೋಧವಿದೆ ಎಂದು ಸುದ್ದಿ ಪ್ರಸಾರ ಮಾಡುತ್ತಿವೆ. ಇದನ್ನು ನೋಡಿದ ವಿಪಕ್ಷ ನಾಯಕರು ಸಿದ್ದರಾಮಯ್ಯನನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯ ನಮ್ಮ ದೇಶದ ಐಕ್ಯತೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಆದರೆ, ಇದೀಗ ಸಿಎಂ ಸಿದ್ದರಾಮಯ್ಯ ನಾನು ಹೇಳಿರುವುದು ಹಾಗಲ್ಲ. ಪಾಕ್ ಮೇಲೆ ಯುದ್ಧ ಒಂದೇ ಪರಿಹಾರವಲ್ಲ. ಒಂದು ವೇಳೆ ಯುದ್ಧ ಅನಿವಾರ್ಯವಾದರೆ ಮಾಡಲಿ ಎಂದು ಹೇಳಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more