ಸಿದ್ಧರಾಮಯ್ಯ 'ಯುದ್ಧ ಬೇಡ' ಹೇಳಿಕೆ ಪಾಕಿಸ್ತಾನದಲ್ಲಿ ಟ್ರೆಂಡ್; ನಾನು ಹೇಳಿದ್ದು ಹಂಗಲ್ಲ ಎಂದ ಸಿಎಂ!

ಸಿದ್ಧರಾಮಯ್ಯ 'ಯುದ್ಧ ಬೇಡ' ಹೇಳಿಕೆ ಪಾಕಿಸ್ತಾನದಲ್ಲಿ ಟ್ರೆಂಡ್; ನಾನು ಹೇಳಿದ್ದು ಹಂಗಲ್ಲ ಎಂದ ಸಿಎಂ!

Published : Apr 28, 2025, 02:41 PM ISTUpdated : Apr 28, 2025, 02:52 PM IST

ಪಾಕಿಸ್ತಾನ ಬೆಂಬಲಿತ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತದ ಯುದ್ಧದ ಸಿದ್ಧತೆಯ ನಡುವೆ, ಸಿಎಂ ಸಿದ್ದರಾಮಯ್ಯ ಅವರು ಯುದ್ಧವೊಂದೇ ಪರಿಹಾರವಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆ ಪಾಕಿಸ್ತಾನದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿಯೇ ಯುದ್ಧ ವಿರೋಧಿ ಭಾವನೆ ಇದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ಬೆಂಗಳೂರು (ಏ.28): ಪಾಕ್ ಬೆಂಬಲಿಕ ಇಸ್ಲಾಮಿಕ್ ಉಗ್ರರು ಭಾರತದ ಕಾಶ್ಮೀರದೊಳಗೆ ನುಗ್ಗಿ 26 ಹಿಂದೂ ಪ್ರವಾಸಿಗರ ಮಾರಣಹೋಮ ಮಾಡಿದ್ದಾರೆ. ಇದೀಗ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಲು ಸಿದ್ಧವಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು 'ಪಾಕಿಸ್ತಾನದ ಮೇಲೆ ಯುದ್ಧ ಮಾಡುವುದೊಂದೇ ಪರಿಹಾರವಲ್ಲ' ಎಂದು ಹೇಳುವ ಮೂಲಕ ಯುದ್ಧೋನ್ಮಾದಕ್ಕೆ ತಣ್ಣೀರೆರಚಿದ್ದಾರೆ.

ಜಾಗತಿಕ ಮಟ್ಟದಲ್ಲಿ ದೊಡ್ಡ ಪಿಡುಗು ಆಗಿ ಕಾಡುತ್ತಿರುವ ಉಗ್ರರಿಗೆ ಬೆಂಬಲ ಕೊಟ್ಟಿರುವ ಪಾಕ್, ಭಾರತದ ಮೇಲಾಗಿರುವ ದಾಳಿಯನ್ನು ಈವರೆಗೂ ಖಂಡನೆ ಮಾಡಿಲ್ಲ. ಇದೀಗ ಪಾಕ್ ನೆಲದಲ್ಲಿ ಅಡಗಿರುವ ಉಗ್ರರ ವಿರುದ್ಧ ಭಾರತ ದಾಳಿ ಮಾಡುವ ಎಚ್ಚರಿಕೆ ನೀಡಿದೆ. ಇದರಿಂದ ಬೆಚ್ಚಿದ ಪಾಕಿಸ್ತಾನ ನಾವು ಕೂಡ ಭಾರತದ ಮೇಲೆ ಪರಮಾಣು ಬಾಂಬ್ ಹಾಕ್ತೇವೆ ಎಂದು ಪಾಕ್ ಸಚಿವರು, ಮಂತ್ರಿಗಳು ಹಾಗೂ ಸೇನಾಪಡೆ ಮುಖ್ಯಸ್ಥರು ಬಾಯಿಗೆ ಬಂದಂತೆ ಹೇಳಿಕೆ ಕೊಡುತ್ತಿದ್ದಾರೆ. ಪಾಕಿಸ್ತಾನದಲ್ಲಿ ಜನರಿಗೆ ಊಟಕ್ಕೂ ಪರದಾಡುವ ಸ್ಥಿತಿ ಇದ್ದು, ಆರ್ಥಿಕ ಸ್ಥಿತಿ ಮಕಾಡೆ ಮಲಗಿದೆ. ಹೀಗಿದ್ದರೂ ಭಾರತವನ್ನು ಹೊಡೆದುರುಳಿಸುತ್ತೇವೆ ಎಂದು ಹೇಳುತ್ತಿರುವ ಪಾಕ್ ವಿರುದ್ಧ ಯುದ್ಧ ಬೇಡ ಎಂದು ಹೇಳಿರುವ ಸಿದ್ದರಾಮಯ್ಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಪಾಕಿಸ್ತಾನದ ಮೇಲೆ ಯುದ್ಧ ಬೇಡ ಎಂದು ಹೇಳಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೇಳಿಕೆ ಪಾಕಿಸ್ತಾನದಲ್ಲಿ ಭಾರೀ ವೈರಲ್ ಆಗಿದೆ. ಅಲ್ಲಿನ ಮಾಧ್ಯಮಗಳು ಭಾರತದಲ್ಲಿಯೇ ಪಾಕ್ ವಿರುದ್ಧ ಯುದ್ಧಕ್ಕೆ ವೊರೋಧವಿದೆ ಎಂದು ಸುದ್ದಿ ಪ್ರಸಾರ ಮಾಡುತ್ತಿವೆ. ಇದನ್ನು ನೋಡಿದ ವಿಪಕ್ಷ ನಾಯಕರು ಸಿದ್ದರಾಮಯ್ಯನನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯ ನಮ್ಮ ದೇಶದ ಐಕ್ಯತೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಆದರೆ, ಇದೀಗ ಸಿಎಂ ಸಿದ್ದರಾಮಯ್ಯ ನಾನು ಹೇಳಿರುವುದು ಹಾಗಲ್ಲ. ಪಾಕ್ ಮೇಲೆ ಯುದ್ಧ ಒಂದೇ ಪರಿಹಾರವಲ್ಲ. ಒಂದು ವೇಳೆ ಯುದ್ಧ ಅನಿವಾರ್ಯವಾದರೆ ಮಾಡಲಿ ಎಂದು ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more