ರಾಜ್ಯದಲ್ಲಿ ಜೋರಾಗಲಿದೆ ವರುಣನ ಆರ್ಭಟ; ಅಲರ್ಟ್...ಅಲರ್ಟ್...!

Aug 3, 2020, 5:41 PM IST

ಬೆಂಗಳೂರು (ಆ. 03): ಆಗಸ್ಟ್‌ 4 ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿ, ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. 

ಉತ್ತರ ಒಳನಾಡಿನ ಧಾರವಾಡ, ಕಲಬುರ್ಗಿ, ಹಾವೇರಿ, ಬೀದರ್‌ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ‘ಎಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನÜ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ಸಂಭವವಿದೆ.

ನೊರೆ ಹಾಲಿನಂತ ಜಲಧಾರೆ, ಮಳೆಗಾಲದಲ್ಲಿ ಮೈದುಂಬಿ ನಿಂತ ಕಲ್ಲೇರಿಮೂಲೆ ಜಲಪಾತ