Tumakuru Bus accident:  ಸಾವಿನ ಸವಾರಿಯಾದ ಬಸ್, ಕಾಲೇಜಿಗೆ ಹೋಗಿ ಬರ್ತೀನಿ ಅಂದವರು ಮಸಣ ಸೇರಿದರು

Tumakuru Bus accident: ಸಾವಿನ ಸವಾರಿಯಾದ ಬಸ್, ಕಾಲೇಜಿಗೆ ಹೋಗಿ ಬರ್ತೀನಿ ಅಂದವರು ಮಸಣ ಸೇರಿದರು

Suvarna News   | Asianet News
Published : Mar 20, 2022, 11:39 AM IST

ಅಮ್ಮ ಕೆಲಸಕ್ಕೆ ಹೋಗಿ ಬರ್ತೀನಿ.. ಅಂತಾ ಹೇಳಿ ಬೆಳಗ್ಗೆಯೇ ಮನೆಯಿಂದ ಹೊರಟು ಬಸ್‌ ಹತ್ತಿದವರು. ಆದರೆ, ಕಾಲೇಜಿಗೆ ಹೋಗಿ ಬರುತ್ತೇವೆಂದಿದ್ದ ಮಕ್ಕಳು ಕಾಲೇಜಿಗೆ ಹೋಗಿ ಮನೆ ಸೇರದೇ ಮಸಣ ಸೇರಿದ್ದಾರೆ. ಕೆಲಸಕ್ಕೆ ಹೋಗಿ ಬರ್ತೀವಿ ಎಂದವರು, ಕೈಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ.

ಪಾವಗಡ (ಮಾ. 20): ಅಮ್ಮ ಕೆಲಸಕ್ಕೆ ಹೋಗಿ ಬರ್ತೀನಿ.. ಅಂತಾ ಹೇಳಿ ಬೆಳಗ್ಗೆಯೇ ಮನೆಯಿಂದ ಹೊರಟು ಬಸ್‌ ಹತ್ತಿದವರು. ಆದರೆ, ಕಾಲೇಜಿಗೆ ಹೋಗಿ ಬರುತ್ತೇವೆಂದಿದ್ದ ಮಕ್ಕಳು ಕಾಲೇಜಿಗೆ ಹೋಗಿ ಮನೆ ಸೇರದೇ ಮಸಣ ಸೇರಿದ್ದಾರೆ. ಕೆಲಸಕ್ಕೆ ಹೋಗಿ ಬರ್ತೀವಿ ಎಂದವರು, ಕೈಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಬಳಿ ಶನಿವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಉರುಳಿ ಬಿದ್ದು ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸೇರಿ ಐದು ಜನರು ಸಾವನ್ನಪ್ಪಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಾವಗಡ ಹಾಗೂ ವೈ.ಎನ್‌. ಹೊಸಕೋಟೆ ಮಾರ್ಗವಾಗಿ ಸರ್ಕಾರಿ ಬಸ್‌ಗಳ ಕೊರತೆಯಿಂದಾಗಿ ಖಾಸಗಿ ಬಸ್‌ಗಳ ಓಡಾಟ ಹೆಚ್ಚಿದ್ದು ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಮತ್ತು ಪದವಿಯ ವಾರ್ಷಿಕ ಪರೀಕ್ಷೆಗಳ ಸಮಯದ ಕಾರಣ ಪಾವಗಡ ಪಟ್ಟಣದ, ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಖಾಸಗಿ ಬಸ್‌ಗಳನ್ನು ಅವಲಂಬಿಸಿದ್ದಾರೆ.ಈ ಹಿನ್ನೆಲೆಯ ಸರ್ಕಾರಿ ಬಸ್‌ ಗಳ ಅಭಾವದಿಂದ ಖಾಸಗಿ ಬಸ್‌ಗಳು ಒಳ ಮತ್ತು ಟಾಪ್‌ಗಳ ಮೇಲೆ ಪ್ರಯಾಣಿಕರನ್ನು ಕಿಕ್ಕಿರಿದು ತುಂಬಿಸಿಕೊಂಡು ಪಾವಗಡಕ್ಕೆ ಬರುವುದು ಸಾಮಾನ್ಯವಾಗಿದ್ದು ಹೆಚ್ಚು ಮಂದಿ ಪ್ರಯಾಣಿಕರನ್ನು ತುಂಬಿಸಿಕೊಂಡು ವೇಗವಾಗಿ ಬರುತ್ತಿರುವ ವೇಳೆ,ಕೆರೆ ಕಟ್ಟೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more