ಇಂದಲ್ಲ, ನಾಳೆ ಮುಸ್ಲಿಮರು, ಕ್ರೈಸ್ತರು ಕೂಡ RSS ಆಗ್ತಾರೆ ಎಂದ ಈಶ್ವರಪ್ಪ!

ಇಂದಲ್ಲ, ನಾಳೆ ಮುಸ್ಲಿಮರು, ಕ್ರೈಸ್ತರು ಕೂಡ RSS ಆಗ್ತಾರೆ ಎಂದ ಈಶ್ವರಪ್ಪ!

Published : Mar 24, 2022, 08:10 PM IST

ಆರ್ ಎಸ್ ಎಸ್ ಬಗ್ಗೆ ಸದನದಲ್ಲಿ ಬಿಸಿಬಿಸಿ ಚರ್ಚೆ

ಮೊದಲು ಮಾನವೀಯತೆ, ನಂತರ ಬಿಜೆಪಿ ಹಾಗೂ ಆರ್ ಎಸ್ಎಸ್ ಎಂದ ಸಿದ್ಧರಾಮಯ್ಯ

ಆರ್ ಎಸ್ ಎಸ್ ಬಗ್ಗೆ ಯಾಕಿಷ್ಟು ಸಿಟ್ಟು ಎಂದು ಪ್ರಶ್ನಿಸಿದ ಸ್ಪೀಕರ್

ಬೆಂಗಳೂರು (ಮಾ.24): ರಾಜ್ಯ ವಿಧಾನಸಭೆಯಲ್ಲಿ (VidhanaSabha) ಗುರುವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh) ಬಗ್ಗೆ ಬಿಸಿಬಿಸಿ ಚರ್ಚೆ ನಡೆಯಿತು. ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ಪಕ್ಷದ ನಡುವೆ ಆರ್ ಎಸ್ ಎಸ್ (RSS)ವಿಚಾರ ಚರ್ಚೆಗೆ ಕಾರಣವಾಯಿತು. ಸಚಿವ ಅಶೋಕ್ ಅವರನ್ನು ಕಾಲೆಳೆಯುತ್ತಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಮಾತನಾಡಿದರು.


ನನಗೆ ಮೊದಲು ಮಾನವೀಯತೆ ನಂತರ, ಬಿಜೆಪಿ, ಕಾಂಗ್ರೆಸ್, ಆರ್ ಎಸ್ಎಸ್ ಎಂದು ಸಿದ್ಧರಾಮಯ್ಯ ಹೇಳಿದ್ದಕ್ಕೆ, ಸ್ಪೀಕರ್ ಸ್ಥಾನದಲ್ಲಿದ್ದ ಕಾಗೇರಿ, ನಮ್ಮ ಆರ್ ಎಸ್ಎಸ್ ಬಗ್ಗೆ ನಿಮಗೆ ಯಾಕಿಷ್ಟು ಕೋಪ ಎಂದುಬಿಟ್ಟರು. ಸ್ಪೀಕರ್ ಸ್ಥಾನದಲ್ಲಿ ಕುಳಿತು "ನಮ್ಮ ಆರ್ ಎಸ್ಎಸ್" ಎಂದಿದ್ದಕ್ಕೆ ಶಾಸಕ ಜಮೀರ್ ಅಹ್ಮದ್ ಆಕ್ಷೇಪ ವ್ಯಕ್ತಪಡಿಸಿದರು. ಇದರ ಬೆನ್ನಲ್ಲಿಯೇ ನಾಳೆ ನೀವೂ ಕೂಡ ನಮ್ಮ ಆರ್ ಎಸ್ಎಸ್ ಎಂದು ಹೇಳಬೇಕಾಗುವ ಪರಿಸ್ಥಿತಿ ಬರಬಹುದು ಎಂದು ಪ್ರತಿಕ್ರಿಯಿಸಿದರು.

ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ರಾಜ್ಯಾದ್ಯಂತ ಆಂದೋಲನಕ್ಕೆ ಶ್ರೀರಾಮಸೇನೆ ನಿರ್ಧಾರ

ಈ ನಡುವೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ (ks eshwarappa), ಇಂದಲ್ಲ ನಾಳೆ ಮುಸ್ಲಿಮರು ಹಾಗೂ ಕ್ರೈಸ್ತರೂ ಕೂಡ ಆರ್ ಎಸ್ಎಸ್ ಆಗ್ತಾರೆ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಜೆ ಜಾರ್ಜ್, "ಇದು ಆಗಲ್ಲ, ಸಾಧ್ಯವೂ ಇಲ್ಲ, ಆಗ ನೀವೇ ಇರೋದಿಲ್ಲ ಎಂದು ತಿವಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more