ಇಂದಲ್ಲ, ನಾಳೆ ಮುಸ್ಲಿಮರು, ಕ್ರೈಸ್ತರು ಕೂಡ RSS ಆಗ್ತಾರೆ ಎಂದ ಈಶ್ವರಪ್ಪ!

ಇಂದಲ್ಲ, ನಾಳೆ ಮುಸ್ಲಿಮರು, ಕ್ರೈಸ್ತರು ಕೂಡ RSS ಆಗ್ತಾರೆ ಎಂದ ಈಶ್ವರಪ್ಪ!

Published : Mar 24, 2022, 08:10 PM IST

ಆರ್ ಎಸ್ ಎಸ್ ಬಗ್ಗೆ ಸದನದಲ್ಲಿ ಬಿಸಿಬಿಸಿ ಚರ್ಚೆ

ಮೊದಲು ಮಾನವೀಯತೆ, ನಂತರ ಬಿಜೆಪಿ ಹಾಗೂ ಆರ್ ಎಸ್ಎಸ್ ಎಂದ ಸಿದ್ಧರಾಮಯ್ಯ

ಆರ್ ಎಸ್ ಎಸ್ ಬಗ್ಗೆ ಯಾಕಿಷ್ಟು ಸಿಟ್ಟು ಎಂದು ಪ್ರಶ್ನಿಸಿದ ಸ್ಪೀಕರ್

ಬೆಂಗಳೂರು (ಮಾ.24): ರಾಜ್ಯ ವಿಧಾನಸಭೆಯಲ್ಲಿ (VidhanaSabha) ಗುರುವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh) ಬಗ್ಗೆ ಬಿಸಿಬಿಸಿ ಚರ್ಚೆ ನಡೆಯಿತು. ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ಪಕ್ಷದ ನಡುವೆ ಆರ್ ಎಸ್ ಎಸ್ (RSS)ವಿಚಾರ ಚರ್ಚೆಗೆ ಕಾರಣವಾಯಿತು. ಸಚಿವ ಅಶೋಕ್ ಅವರನ್ನು ಕಾಲೆಳೆಯುತ್ತಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಮಾತನಾಡಿದರು.


ನನಗೆ ಮೊದಲು ಮಾನವೀಯತೆ ನಂತರ, ಬಿಜೆಪಿ, ಕಾಂಗ್ರೆಸ್, ಆರ್ ಎಸ್ಎಸ್ ಎಂದು ಸಿದ್ಧರಾಮಯ್ಯ ಹೇಳಿದ್ದಕ್ಕೆ, ಸ್ಪೀಕರ್ ಸ್ಥಾನದಲ್ಲಿದ್ದ ಕಾಗೇರಿ, ನಮ್ಮ ಆರ್ ಎಸ್ಎಸ್ ಬಗ್ಗೆ ನಿಮಗೆ ಯಾಕಿಷ್ಟು ಕೋಪ ಎಂದುಬಿಟ್ಟರು. ಸ್ಪೀಕರ್ ಸ್ಥಾನದಲ್ಲಿ ಕುಳಿತು "ನಮ್ಮ ಆರ್ ಎಸ್ಎಸ್" ಎಂದಿದ್ದಕ್ಕೆ ಶಾಸಕ ಜಮೀರ್ ಅಹ್ಮದ್ ಆಕ್ಷೇಪ ವ್ಯಕ್ತಪಡಿಸಿದರು. ಇದರ ಬೆನ್ನಲ್ಲಿಯೇ ನಾಳೆ ನೀವೂ ಕೂಡ ನಮ್ಮ ಆರ್ ಎಸ್ಎಸ್ ಎಂದು ಹೇಳಬೇಕಾಗುವ ಪರಿಸ್ಥಿತಿ ಬರಬಹುದು ಎಂದು ಪ್ರತಿಕ್ರಿಯಿಸಿದರು.

ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ರಾಜ್ಯಾದ್ಯಂತ ಆಂದೋಲನಕ್ಕೆ ಶ್ರೀರಾಮಸೇನೆ ನಿರ್ಧಾರ

ಈ ನಡುವೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ (ks eshwarappa), ಇಂದಲ್ಲ ನಾಳೆ ಮುಸ್ಲಿಮರು ಹಾಗೂ ಕ್ರೈಸ್ತರೂ ಕೂಡ ಆರ್ ಎಸ್ಎಸ್ ಆಗ್ತಾರೆ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಜೆ ಜಾರ್ಜ್, "ಇದು ಆಗಲ್ಲ, ಸಾಧ್ಯವೂ ಇಲ್ಲ, ಆಗ ನೀವೇ ಇರೋದಿಲ್ಲ ಎಂದು ತಿವಿದರು.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more