ನಾವು ಬ್ರಿಟಿಷರ ಬಂದೂಕಿಗೆ ಹೆದರಿಲ್ಲ, ಇನ್ನು ಮೋದಿ ಬಂದೂಕಿಗೆ ಹೆದರ್ತೀವಾ?

ನಾವು ಬ್ರಿಟಿಷರ ಬಂದೂಕಿಗೆ ಹೆದರಿಲ್ಲ, ಇನ್ನು ಮೋದಿ ಬಂದೂಕಿಗೆ ಹೆದರ್ತೀವಾ?

Published : Jul 21, 2022, 06:06 PM IST

'ನಾವು ಬ್ರಿಟಿಷರ ಬಂದೂಕಿಗೆ ಹೆದರಿಲ್ಲ, ಇನ್ನು ಮೋದಿ ಬಂದೂಕಿಗೆ ಹೆದರ್ತೀವಾ? ನಾವು ಸೋನಿಯಾ ರಾಹುಲ್ ಗಾಂಧಿಗಾಗಿ ಹೋರಾಟ ಮಾಡ್ತಿಲ್ಲ, ಪ್ರಜಾಪ್ರಭುತ್ವ ಉಳಿಸಲು ಹೋರಾಡುತ್ತಿದ್ದೀವಿ, ಎಂದು ಕೃಷ್ಣೇ ಬೈರೇಗೌಡ ಗುಡುಗಿದ್ದಾರೆ

ಬೆಂಗಳೂರು (ಜುಲೈ 21): ರಾಷ್ಟ್ರರಾಜಧಾನಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ಗುರುವಾರ ವಿಚಾರಣೆ ನಡೆಸಿತು. ಈ ವೇಳೆ ದೇಶಾದ್ಯಂತ ಪ್ರತಿಭಟನೆಗಳು ನಡೆದವು. ಕರ್ನಾಟಕದಲ್ಲಿ ನಡೆದ ಪ್ರತಿಭಟನೆಯ ವೇಳೆ, ಶಾಸಕ ಕೃಷ್ಣಬೈರೇಗೌಡ (MLA  Krishna Byre Gowda) ಹೇಳಿದ ಮಾತುಗಳು ಗಮನಸೆಳೆದಿವೆ. 'ನಾವು ಬ್ರಿಟಿಷರ ಬಂದೂಕಿಗೆ ಹೆದರಿಲ್ಲ, ಇನ್ನು ಮೋದಿ ಬಂದೂಕಿಗೆ ಹೆದರ್ತೀವಾ? ನಾವು ಸೋನಿಯಾ ರಾಹುಲ್ ಗಾಂಧಿಗಾಗಿ ಹೋರಾಟ ಮಾಡ್ತಿಲ್ಲ, ಪ್ರಜಾಪ್ರಭುತ್ವ ಉಳಿಸಲು ಹೋರಾಡುತ್ತಿದ್ದೀವಿ ಎಂದು ಹೇಳಿದ್ದಾರೆ.

ಇಂಥದ್ದನ್ನೆಲ್ಲಾ ಸಹಿಸಿಕೊಳ್ಳುವ ಶಕ್ತಿ ಕಾಂಗ್ರೆಸ್‌ ನಾಯಕರಿಗೆ ಇದೆ. ಇದು ಕಾಂಗ್ರೆಸ್ ಮೇಲೆ ಮಾಡಿರುವ ದಾಳಿಯಲ್ಲ ಇದು. ಇಡೀ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿ. ಇಡಿಯವರ ವಿಚಾರಣೆಯನ್ನು ಎದುರಿಸುವ ನೈತಿಕ ಶಕ್ತಿ ಖಂಡಿತವಾಗಿ ಸೋನಿಯಾ ಗಾಂಧಿ ಅವರಿಗೆ ಇದೆ. ಇಂಥವರು ನೂರು ಕೇಸ್‌ಗಳನ್ನು ಹಾಕಿದ್ರೂ ರಾಹುಲ್‌ ಗಾಂಧಿ ಅದನ್ನು ಎದುರಿಸುತ್ತಾರೆ. ಇವತ್ತು ಕಾಂಗ್ರೆಸ್‌ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದರೆ, ಇಂದು ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು ಎನ್ನುವ ಉದ್ದೇಶಕ್ಕಾಗಿ ಮಾತ್ರ ಎಂದು ಹೇಳಿದ್ದಾರೆ.

ಏನಿದು ನ್ಯಾಷನಲ್ ಹೆರಾಲ್ಡ್ ಕೇಸ್, ರಾಜಕೀಯ ಸಂಚಲನಕ್ಕೆ ಕಾರಣವಾಗಿರುವ ಪ್ರಕರಣದ ಇತಿಹಾಸ!

ಇಡಿ, ಐಟಿಯಂಥ ಎಷ್ಟೇ ಸೀಳುನಾಯಿಗಳನ್ನು ನಮ್ಮ ಮೇಲೆ ಛೂ ಬಿಡಲಿ. ಇದಕ್ಕೆ ಹೆದರುವ ಜಾಯಮಾನ ಕಾಂಗ್ರೆಸ್‌ ಪಕ್ಷದಲ್ಲ. ನಾವು ಬ್ರಿಟಿಷರಿಗೆ ಹೆದರಿಲ್ಲ. ಅವರ ಜೈಲು, ಬಂದೂಕು ಯಾವುದಕ್ಕೂ ಹೆದರಿಲ್ಲ. ಇನ್ನೂ ಮೋದಿಗೆ ಹೆದರ್ತೀವಾ. ಎಲ್ಲದಕ್ಕೂ ನಾವು ತಯಾರಾಗಿರಬೇಕು ಎಂದು ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more