ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ : ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಸಾಧ್ಯತೆ

ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ : ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಸಾಧ್ಯತೆ

Published : Jul 30, 2023, 10:31 AM IST

ರಾಜ್ಯ ಬಿಜೆಪಿಗೆ ಕಾಂಗ್ರೆಸ್‌ ಸರ್ಕಾರ ಮತ್ತೊಂದು ಶಾಕ್‌ ನೀಡಿದೆ. 40% ಕಮಿಷನ್ ತನಿಖೆಗೆ ಸರ್ಕಾರ ನಿರ್ಧರಿಸಿದ್ದು, ನಿವೃತ್ತ ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ.

ಚುನಾವಣೆ ವೇಳೆ ಬಿಜೆಪಿ 40 ಪರ್ಸೆಂಟ್ ಸರ್ಕಾರ(40% commission) ಎಂದು ಕಾಂಗ್ರೆಸ್‌(Congress) ಆರೋಪ ಮಾಡಿತ್ತು. ಇದೀಗ ಈ ಆರೋಪದ ತನಿಖೆಗೆ ಸರ್ಕಾರ ತೀರ್ಮಾನ ಮಾಡಿದೆ. ಈ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಮರದ ಅಖಾಡಕ್ಕಿಳಿದಿದೆ. ಈ ಬಗ್ಗೆ ಬಿಜೆಪಿ(BJP) ಸರ್ಕಾರದ ಅವಧಿಯಲ್ಲಿ ಮಹಾ ಸಮರವನ್ನೇ ಕಾಂಗ್ರೆಸ್ ನಡೆಸಿತ್ತು. ಸರ್ಕಾರ ರಚನೆ ಬಳಿಕ ಸಿದ್ದರಾಮಯ್ಯ(Siddaramaiah) ಸರ್ಕಾರ ತಣ್ಣಗಾಗಿತ್ತು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ ಎಂದು ಬಿಜೆಪಿ ನಾಯಕರಿಂದಲೇ ಒತ್ತಾಯ ಕೇಳಿಬಂದಿತ್ತು. ಅಲ್ಲದೇ ಮೌನ ಮುರಿದು ತನಿಖೆ ಮಾಡಲಿ ಎಂದು ಸರ್ಕಾರಕ್ಕೆ ಸವಾಲ್ ಹಾಕಿದ್ದರು. ಸಂಸದ ಪ್ರತಾಪ್ ಸಿಂಹ, ಸಿಟಿ ರವಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ಒತ್ತಾಯದ ಬೆನ್ನಲ್ಲೇ 40% ಕಮಿಷನ್ ತನಿಖೆಗೆ ಸರ್ಕಾರ ತೀರ್ಮಾನ ಮಾಡಿದೆ. ನಿವೃತ್ತ ನ್ಯಾ.ನಾಗಮೋಹನ್ ದಾಸ್ (Nagmohan Das)ನೇತೃತ್ವದಲ್ಲಿ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ. ಸಂಪುಟ ಸಭೆಯಲ್ಲೀ 40% ತನಿಖೆಗೆ ಸಚಿವರ ಸಹಮತ ಸಹ ಲಭ್ಯವಾಗಿದೆ.

ಇದನ್ನೂ ವೀಕ್ಷಿಸಿ:  ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more