ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ : ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಸಾಧ್ಯತೆ

ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ : ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಸಾಧ್ಯತೆ

Published : Jul 30, 2023, 10:31 AM IST

ರಾಜ್ಯ ಬಿಜೆಪಿಗೆ ಕಾಂಗ್ರೆಸ್‌ ಸರ್ಕಾರ ಮತ್ತೊಂದು ಶಾಕ್‌ ನೀಡಿದೆ. 40% ಕಮಿಷನ್ ತನಿಖೆಗೆ ಸರ್ಕಾರ ನಿರ್ಧರಿಸಿದ್ದು, ನಿವೃತ್ತ ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ.

ಚುನಾವಣೆ ವೇಳೆ ಬಿಜೆಪಿ 40 ಪರ್ಸೆಂಟ್ ಸರ್ಕಾರ(40% commission) ಎಂದು ಕಾಂಗ್ರೆಸ್‌(Congress) ಆರೋಪ ಮಾಡಿತ್ತು. ಇದೀಗ ಈ ಆರೋಪದ ತನಿಖೆಗೆ ಸರ್ಕಾರ ತೀರ್ಮಾನ ಮಾಡಿದೆ. ಈ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಮರದ ಅಖಾಡಕ್ಕಿಳಿದಿದೆ. ಈ ಬಗ್ಗೆ ಬಿಜೆಪಿ(BJP) ಸರ್ಕಾರದ ಅವಧಿಯಲ್ಲಿ ಮಹಾ ಸಮರವನ್ನೇ ಕಾಂಗ್ರೆಸ್ ನಡೆಸಿತ್ತು. ಸರ್ಕಾರ ರಚನೆ ಬಳಿಕ ಸಿದ್ದರಾಮಯ್ಯ(Siddaramaiah) ಸರ್ಕಾರ ತಣ್ಣಗಾಗಿತ್ತು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ ಎಂದು ಬಿಜೆಪಿ ನಾಯಕರಿಂದಲೇ ಒತ್ತಾಯ ಕೇಳಿಬಂದಿತ್ತು. ಅಲ್ಲದೇ ಮೌನ ಮುರಿದು ತನಿಖೆ ಮಾಡಲಿ ಎಂದು ಸರ್ಕಾರಕ್ಕೆ ಸವಾಲ್ ಹಾಕಿದ್ದರು. ಸಂಸದ ಪ್ರತಾಪ್ ಸಿಂಹ, ಸಿಟಿ ರವಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ಒತ್ತಾಯದ ಬೆನ್ನಲ್ಲೇ 40% ಕಮಿಷನ್ ತನಿಖೆಗೆ ಸರ್ಕಾರ ತೀರ್ಮಾನ ಮಾಡಿದೆ. ನಿವೃತ್ತ ನ್ಯಾ.ನಾಗಮೋಹನ್ ದಾಸ್ (Nagmohan Das)ನೇತೃತ್ವದಲ್ಲಿ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ. ಸಂಪುಟ ಸಭೆಯಲ್ಲೀ 40% ತನಿಖೆಗೆ ಸಚಿವರ ಸಹಮತ ಸಹ ಲಭ್ಯವಾಗಿದೆ.

ಇದನ್ನೂ ವೀಕ್ಷಿಸಿ:  ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more