Karnataka Politics: ಕಾಂಗ್ರೆಸ್‌ಗೆ ರಾಜೀನಾಮೆ, ಗೌಡರನ್ನು ಹೊಗಳಿದ ಇಬ್ರಾಹಿಂ: ಶೀಘ್ರ ಜೆಡಿಎಸ್‌ಗೆ?

Karnataka Politics: ಕಾಂಗ್ರೆಸ್‌ಗೆ ರಾಜೀನಾಮೆ, ಗೌಡರನ್ನು ಹೊಗಳಿದ ಇಬ್ರಾಹಿಂ: ಶೀಘ್ರ ಜೆಡಿಎಸ್‌ಗೆ?

Published : Jan 28, 2022, 06:14 PM IST

ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ನಾಯಕ ಸಿ ಎಂ ಇಬ್ರಾಹಿಂ ಕಾಂಗ್ರೆಸ್ ಬಿಡುವ ಮಾತುಗಳನ್ನಾಡಿದ್ದಾರೆ. ಸಿದ್ದು ವಿರುದ್ಧವೂ ಗರಂ ಆಗಿದ್ದಾರೆ.  

ಬೆಂಗಳೂರು (ಜ. 28): ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ನಾಯಕ ಸಿ ಎಂ ಇಬ್ರಾಹಿಂ ಕಾಂಗ್ರೆಸ್ ಬಿಡುವ ಮಾತುಗಳನ್ನಾಡಿದ್ದಾರೆ. ಸಿದ್ದು ವಿರುದ್ಧವೂ ಗರಂ ಆಗಿದ್ದಾರೆ.  ‘ಕಾಂಗ್ರೆಸ್‌ಗೆ ನಾನು ಬೇಡ ಎಂಬ ತೀರ್ಮಾನವನ್ನು ಕಾಂಗ್ರೆಸ್‌ನವರು ಮಾಡಿದ್ದಾರೆ. ಹೀಗಾಗಿ ನನಗೂ ಕಾಂಗ್ರೆಸ್‌ಗೂ ಸಂಬಂಧ ಮುಗಿದಿದೆ. ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಯಾವ ಪಕ್ಷ ಸೇರುತ್ತೇನೆ ಎಂಬುದನ್ನು ಮುಂದೆ ನೋಡಿ.’ ಪರಿಷತ್‌ ಪ್ರತಿಪಕ್ಷ ಸ್ಥಾನ ಆಕಾಂಕ್ಷಿಯಾಗಿದ್ದ ಸಿ.ಎಂ. ಇಬ್ರಾಹಿಂ ಅವರ ಆಕ್ರೋಶದ ಮಾತುಗಳನ್ನಾಡಿದ್ದಾರೆ. 

ಪ್ರತಿಪಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್‌ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಇಬ್ರಾಹಿಂ ಈ ರೀತಿ ಮಾತನಾಡಿ ಕಾಂಗ್ರೆಸ್‌ ತ್ಯಜಿಸುವ ಇಂಗಿತ ವ್ಯಕ್ತಪಡಿಸಿದರು. ‘ಡಿ.ಕೆ. ಶಿವಕುಮಾರ್‌, ಬಿ.ಕೆ. ಹರಿಪ್ರಸಾದ್‌ರಂತಹ ಉತ್ತಮ ಟೀಂ ರಚಿಸಿ ನನ್ನ ಮೇಲಿದ್ದ ಭಾರವನ್ನು ಸೋನಿಯಾಗಾಂಧಿ ಕಡಿಮೆ ಮಾಡಿದ್ದಾರೆ. ಈಗ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರನಾಗಿದ್ದು, ಕಾಂಗ್ರೆಸ್‌ ಬಿಟ್ಟು ಹೊರ ಬಂದಿದ್ದೇನೆ. ಈಗ ಕಾಂಗ್ರೆಸ್‌ ಈಗ ನನಗೆ ಪರಸ್ತ್ರೀ ಇದ್ದಂತೆ. ಪರಸ್ತ್ರೀ ಬಗ್ಗೆ ನಾನು ಮಾತನಾಡಲ್ಲ. ಕಾಂಗ್ರೆಸ್‌ನ ಪರಿಷತ್‌ ಸ್ಥಾನ ನನಗೆ ಬೇಡ. ಶೀಘ್ರವೇ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ’ ಎಂದಿದ್ದಾರೆ. ಹಾಗಾದರೆ ಇಬ್ರಾಹಿಂ ಮುಂದಿನ ನಡೆಯೇನು..? 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more