Karnataka Politics: ಕಾಂಗ್ರೆಸ್‌ಗೆ ರಾಜೀನಾಮೆ, ಗೌಡರನ್ನು ಹೊಗಳಿದ ಇಬ್ರಾಹಿಂ: ಶೀಘ್ರ ಜೆಡಿಎಸ್‌ಗೆ?

Karnataka Politics: ಕಾಂಗ್ರೆಸ್‌ಗೆ ರಾಜೀನಾಮೆ, ಗೌಡರನ್ನು ಹೊಗಳಿದ ಇಬ್ರಾಹಿಂ: ಶೀಘ್ರ ಜೆಡಿಎಸ್‌ಗೆ?

Published : Jan 28, 2022, 06:14 PM IST

ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ನಾಯಕ ಸಿ ಎಂ ಇಬ್ರಾಹಿಂ ಕಾಂಗ್ರೆಸ್ ಬಿಡುವ ಮಾತುಗಳನ್ನಾಡಿದ್ದಾರೆ. ಸಿದ್ದು ವಿರುದ್ಧವೂ ಗರಂ ಆಗಿದ್ದಾರೆ.  

ಬೆಂಗಳೂರು (ಜ. 28): ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ನಾಯಕ ಸಿ ಎಂ ಇಬ್ರಾಹಿಂ ಕಾಂಗ್ರೆಸ್ ಬಿಡುವ ಮಾತುಗಳನ್ನಾಡಿದ್ದಾರೆ. ಸಿದ್ದು ವಿರುದ್ಧವೂ ಗರಂ ಆಗಿದ್ದಾರೆ.  ‘ಕಾಂಗ್ರೆಸ್‌ಗೆ ನಾನು ಬೇಡ ಎಂಬ ತೀರ್ಮಾನವನ್ನು ಕಾಂಗ್ರೆಸ್‌ನವರು ಮಾಡಿದ್ದಾರೆ. ಹೀಗಾಗಿ ನನಗೂ ಕಾಂಗ್ರೆಸ್‌ಗೂ ಸಂಬಂಧ ಮುಗಿದಿದೆ. ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಯಾವ ಪಕ್ಷ ಸೇರುತ್ತೇನೆ ಎಂಬುದನ್ನು ಮುಂದೆ ನೋಡಿ.’ ಪರಿಷತ್‌ ಪ್ರತಿಪಕ್ಷ ಸ್ಥಾನ ಆಕಾಂಕ್ಷಿಯಾಗಿದ್ದ ಸಿ.ಎಂ. ಇಬ್ರಾಹಿಂ ಅವರ ಆಕ್ರೋಶದ ಮಾತುಗಳನ್ನಾಡಿದ್ದಾರೆ. 

ಪ್ರತಿಪಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್‌ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಇಬ್ರಾಹಿಂ ಈ ರೀತಿ ಮಾತನಾಡಿ ಕಾಂಗ್ರೆಸ್‌ ತ್ಯಜಿಸುವ ಇಂಗಿತ ವ್ಯಕ್ತಪಡಿಸಿದರು. ‘ಡಿ.ಕೆ. ಶಿವಕುಮಾರ್‌, ಬಿ.ಕೆ. ಹರಿಪ್ರಸಾದ್‌ರಂತಹ ಉತ್ತಮ ಟೀಂ ರಚಿಸಿ ನನ್ನ ಮೇಲಿದ್ದ ಭಾರವನ್ನು ಸೋನಿಯಾಗಾಂಧಿ ಕಡಿಮೆ ಮಾಡಿದ್ದಾರೆ. ಈಗ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರನಾಗಿದ್ದು, ಕಾಂಗ್ರೆಸ್‌ ಬಿಟ್ಟು ಹೊರ ಬಂದಿದ್ದೇನೆ. ಈಗ ಕಾಂಗ್ರೆಸ್‌ ಈಗ ನನಗೆ ಪರಸ್ತ್ರೀ ಇದ್ದಂತೆ. ಪರಸ್ತ್ರೀ ಬಗ್ಗೆ ನಾನು ಮಾತನಾಡಲ್ಲ. ಕಾಂಗ್ರೆಸ್‌ನ ಪರಿಷತ್‌ ಸ್ಥಾನ ನನಗೆ ಬೇಡ. ಶೀಘ್ರವೇ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ’ ಎಂದಿದ್ದಾರೆ. ಹಾಗಾದರೆ ಇಬ್ರಾಹಿಂ ಮುಂದಿನ ನಡೆಯೇನು..? 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more