Karnataka Politics: ಕಾಂಗ್ರೆಸ್‌ಗೆ ರಾಜೀನಾಮೆ, ಗೌಡರನ್ನು ಹೊಗಳಿದ ಇಬ್ರಾಹಿಂ: ಶೀಘ್ರ ಜೆಡಿಎಸ್‌ಗೆ?

Karnataka Politics: ಕಾಂಗ್ರೆಸ್‌ಗೆ ರಾಜೀನಾಮೆ, ಗೌಡರನ್ನು ಹೊಗಳಿದ ಇಬ್ರಾಹಿಂ: ಶೀಘ್ರ ಜೆಡಿಎಸ್‌ಗೆ?

Published : Jan 28, 2022, 06:14 PM IST

ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ನಾಯಕ ಸಿ ಎಂ ಇಬ್ರಾಹಿಂ ಕಾಂಗ್ರೆಸ್ ಬಿಡುವ ಮಾತುಗಳನ್ನಾಡಿದ್ದಾರೆ. ಸಿದ್ದು ವಿರುದ್ಧವೂ ಗರಂ ಆಗಿದ್ದಾರೆ.  

ಬೆಂಗಳೂರು (ಜ. 28): ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ನಾಯಕ ಸಿ ಎಂ ಇಬ್ರಾಹಿಂ ಕಾಂಗ್ರೆಸ್ ಬಿಡುವ ಮಾತುಗಳನ್ನಾಡಿದ್ದಾರೆ. ಸಿದ್ದು ವಿರುದ್ಧವೂ ಗರಂ ಆಗಿದ್ದಾರೆ.  ‘ಕಾಂಗ್ರೆಸ್‌ಗೆ ನಾನು ಬೇಡ ಎಂಬ ತೀರ್ಮಾನವನ್ನು ಕಾಂಗ್ರೆಸ್‌ನವರು ಮಾಡಿದ್ದಾರೆ. ಹೀಗಾಗಿ ನನಗೂ ಕಾಂಗ್ರೆಸ್‌ಗೂ ಸಂಬಂಧ ಮುಗಿದಿದೆ. ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಯಾವ ಪಕ್ಷ ಸೇರುತ್ತೇನೆ ಎಂಬುದನ್ನು ಮುಂದೆ ನೋಡಿ.’ ಪರಿಷತ್‌ ಪ್ರತಿಪಕ್ಷ ಸ್ಥಾನ ಆಕಾಂಕ್ಷಿಯಾಗಿದ್ದ ಸಿ.ಎಂ. ಇಬ್ರಾಹಿಂ ಅವರ ಆಕ್ರೋಶದ ಮಾತುಗಳನ್ನಾಡಿದ್ದಾರೆ. 

ಪ್ರತಿಪಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್‌ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಇಬ್ರಾಹಿಂ ಈ ರೀತಿ ಮಾತನಾಡಿ ಕಾಂಗ್ರೆಸ್‌ ತ್ಯಜಿಸುವ ಇಂಗಿತ ವ್ಯಕ್ತಪಡಿಸಿದರು. ‘ಡಿ.ಕೆ. ಶಿವಕುಮಾರ್‌, ಬಿ.ಕೆ. ಹರಿಪ್ರಸಾದ್‌ರಂತಹ ಉತ್ತಮ ಟೀಂ ರಚಿಸಿ ನನ್ನ ಮೇಲಿದ್ದ ಭಾರವನ್ನು ಸೋನಿಯಾಗಾಂಧಿ ಕಡಿಮೆ ಮಾಡಿದ್ದಾರೆ. ಈಗ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರನಾಗಿದ್ದು, ಕಾಂಗ್ರೆಸ್‌ ಬಿಟ್ಟು ಹೊರ ಬಂದಿದ್ದೇನೆ. ಈಗ ಕಾಂಗ್ರೆಸ್‌ ಈಗ ನನಗೆ ಪರಸ್ತ್ರೀ ಇದ್ದಂತೆ. ಪರಸ್ತ್ರೀ ಬಗ್ಗೆ ನಾನು ಮಾತನಾಡಲ್ಲ. ಕಾಂಗ್ರೆಸ್‌ನ ಪರಿಷತ್‌ ಸ್ಥಾನ ನನಗೆ ಬೇಡ. ಶೀಘ್ರವೇ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ’ ಎಂದಿದ್ದಾರೆ. ಹಾಗಾದರೆ ಇಬ್ರಾಹಿಂ ಮುಂದಿನ ನಡೆಯೇನು..? 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more