ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

Published : Mar 25, 2022, 03:26 PM IST

ಮತ್ತೆ ಹಿಜಾಬ್ ಪರವಾಗಿ ಮಾತನಾಡಿದ ಸಿದ್ಧರಾಮಯ್ಯ

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಲ್ವಾ

ಇದನ್ನೇ ಮುಸ್ಲಿಂ ಹೆಣ್ಣು ಮಕ್ಕಳು ಹಾಕಿಕೊಂಡರೇ ತಪ್ಪೇನು ಎಂದು ಪ್ರಶ್ನೆ

ಬೆಂಗಳೂರು (ಮಾ. 25):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ (Hijab) ಧರಿಸುವುದಕ್ಕೆ ಅವಕಾಶ ಇಲ್ಲ ಎಂದು ಕರ್ನಾಟಕ ಹೈಕೋರ್ಟ್​ ಬಹುಮತದ ತೀರ್ಪು ನೀಡಿದ್ದರ ಹೊರತಾಗಿಯೂ (hijab verdict) ಬೇರೆ ಮಾರ್ಗದ ಮೂಲಕ ಹಿಜಾಬ್ ಗೆ ಅವಕಾಶ ಒದಗಿಸಿಕೊಡುವ ಪ್ರಯತ್ನಗಳು ನಡೆದಿವೆ. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ (Siddaramaiah) ಅವರನ್ನು ಮುಸ್ಲಿಂ ಮುಖಂಡರು ಭೇಟಿ ಮಾಡಿದ ಬಳಿಕ ಹಿಜಾಬ್ ಪರವಾಗಿ ಬ್ಯಾಟಿಂಗ್ ಮಾಡಲು ಆರಂಭಿಸಿದ್ದಾರೆ.

ಗುರುವಾರ ಕಲಾಪದಲ್ಲಿ ಈ ಬಗ್ಗೆ ಮಾತನಾಡಿದ್ದ ಸಿದ್ಧರಾಮಯ್ಯ, ಶುಕ್ರವಾರ ಮೈಸೂರಿನಲ್ಲಿ ಈ ಬಗ್ಗೆ ಮಾತನಾಡುತ್ತಾ ಹಿಂದೂ ಹೆಣ್ಮಕ್ಕಳು (Hindu Womens) ಹಾಗೂ ಸ್ವಾಮೀಜಿಗಳು (Swamiji) ತಲೆ ಮೇಲೆ ಬಟ್ಟೆ ಹಾಕಿಕೊಳ್ತಾರೆ, ಅದೇ ರೀತಿ ಮುಸ್ಲಿಂ ಹೆಣ್ಣು ಮಕ್ಕಳು ಹಾಕಿಕೊಂಡರೇ ನಿಮಗೇನು ಸಮಸ್ಯೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ವಿವಾದಾತ್ಮಕ ಹೇಳಿಕೆಗೆ ಈಗಾಗಲೇ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

ಸೋಮವಾರದಿಂದ ಎಸ್ಸೆಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಈ ಬಗ್ಗೆ ಸದನದಲ್ಲಿ ಮಾತನಾಡುವಂತೆ ಮುಸ್ಲಿಂ ಮುಖಂಡರುಗಳು ಬುಧವಾರ ರಾತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಅದರಂತೆ ಗುರುವಾರ ವಿಧಾನಸಭೆಯಲ್ಲಿ ಮಾತನಾಡಿದ್ದ ಸಿದ್ಧರಾಮಯ್ಯ, ಹಿಜಾಬ್ ಇಲ್ಲದೇ ಇದ್ದಲ್ಲಿ ಕನಿಷ್ಠ ದುಪ್ಪಟ್ಟಾ ಆದ್ರೂ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದಿದ್ದರು.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more