ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

Published : Mar 25, 2022, 03:26 PM IST

ಮತ್ತೆ ಹಿಜಾಬ್ ಪರವಾಗಿ ಮಾತನಾಡಿದ ಸಿದ್ಧರಾಮಯ್ಯ

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಲ್ವಾ

ಇದನ್ನೇ ಮುಸ್ಲಿಂ ಹೆಣ್ಣು ಮಕ್ಕಳು ಹಾಕಿಕೊಂಡರೇ ತಪ್ಪೇನು ಎಂದು ಪ್ರಶ್ನೆ

ಬೆಂಗಳೂರು (ಮಾ. 25):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ (Hijab) ಧರಿಸುವುದಕ್ಕೆ ಅವಕಾಶ ಇಲ್ಲ ಎಂದು ಕರ್ನಾಟಕ ಹೈಕೋರ್ಟ್​ ಬಹುಮತದ ತೀರ್ಪು ನೀಡಿದ್ದರ ಹೊರತಾಗಿಯೂ (hijab verdict) ಬೇರೆ ಮಾರ್ಗದ ಮೂಲಕ ಹಿಜಾಬ್ ಗೆ ಅವಕಾಶ ಒದಗಿಸಿಕೊಡುವ ಪ್ರಯತ್ನಗಳು ನಡೆದಿವೆ. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ (Siddaramaiah) ಅವರನ್ನು ಮುಸ್ಲಿಂ ಮುಖಂಡರು ಭೇಟಿ ಮಾಡಿದ ಬಳಿಕ ಹಿಜಾಬ್ ಪರವಾಗಿ ಬ್ಯಾಟಿಂಗ್ ಮಾಡಲು ಆರಂಭಿಸಿದ್ದಾರೆ.

ಗುರುವಾರ ಕಲಾಪದಲ್ಲಿ ಈ ಬಗ್ಗೆ ಮಾತನಾಡಿದ್ದ ಸಿದ್ಧರಾಮಯ್ಯ, ಶುಕ್ರವಾರ ಮೈಸೂರಿನಲ್ಲಿ ಈ ಬಗ್ಗೆ ಮಾತನಾಡುತ್ತಾ ಹಿಂದೂ ಹೆಣ್ಮಕ್ಕಳು (Hindu Womens) ಹಾಗೂ ಸ್ವಾಮೀಜಿಗಳು (Swamiji) ತಲೆ ಮೇಲೆ ಬಟ್ಟೆ ಹಾಕಿಕೊಳ್ತಾರೆ, ಅದೇ ರೀತಿ ಮುಸ್ಲಿಂ ಹೆಣ್ಣು ಮಕ್ಕಳು ಹಾಕಿಕೊಂಡರೇ ನಿಮಗೇನು ಸಮಸ್ಯೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ವಿವಾದಾತ್ಮಕ ಹೇಳಿಕೆಗೆ ಈಗಾಗಲೇ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

ಸೋಮವಾರದಿಂದ ಎಸ್ಸೆಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಈ ಬಗ್ಗೆ ಸದನದಲ್ಲಿ ಮಾತನಾಡುವಂತೆ ಮುಸ್ಲಿಂ ಮುಖಂಡರುಗಳು ಬುಧವಾರ ರಾತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಅದರಂತೆ ಗುರುವಾರ ವಿಧಾನಸಭೆಯಲ್ಲಿ ಮಾತನಾಡಿದ್ದ ಸಿದ್ಧರಾಮಯ್ಯ, ಹಿಜಾಬ್ ಇಲ್ಲದೇ ಇದ್ದಲ್ಲಿ ಕನಿಷ್ಠ ದುಪ್ಪಟ್ಟಾ ಆದ್ರೂ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದಿದ್ದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more