Mekedatu Padayatre: ಅರ್ಧಕ್ಕೆ ಮೊಟಕುಗೊಂಡ ಪಾದಯಾತ್ರೆ, ಗೆದ್ದಿದ್ಯಾರು.? ಸೋತಿದ್ಯಾರು.?

Mekedatu Padayatre: ಅರ್ಧಕ್ಕೆ ಮೊಟಕುಗೊಂಡ ಪಾದಯಾತ್ರೆ, ಗೆದ್ದಿದ್ಯಾರು.? ಸೋತಿದ್ಯಾರು.?

Published : Jan 14, 2022, 06:08 PM IST

ಕೊರೋನಾ ಸೋಂಕು (Corona Virus) ಏರಿಕೆ, ಕರ್ಫ್ಯೂ ನಡುವೆಯೂ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ (Mekedatu Padayatre) ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ (High Court) ಕೂಡಾ ಛಾಟಿ ಬೀಸಿತ್ತು.  

ಬೆಂಗಳೂರು (ಜ. 14): ಕೊರೋನಾ ಸೋಂಕು (Corona Virus) ಏರಿಕೆ, ಕರ್ಫ್ಯೂ ನಡುವೆಯೂ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ (Mekedatu Padayatre) ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ (High Court) ಕೂಡಾ ಛಾಟಿ ಬೀಸಿತ್ತು.  ಹೈಕೋರ್ಟ್‌ನ ಕಟು ನುಡಿಗಳನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್‌ ಪಕ್ಷ ತನ್ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮೊಟಕುಗೊಳಿಸಿದೆ. 

ಕಾಂಗ್ರೆಸ್‌ ಹೈಕಮಾಂಡ್‌ (Congress HighCommand) ಈ ಹೋರಾಟದ ವಿಷಯದಲ್ಲಿ ಪಕ್ಷಕ್ಕೆ ಮುಜುಗರವಾಗದಂತಹ ನಿರ್ಧಾರ ಕೈಗೊಳ್ಳಿ ಎಂದು ರಾಜ್ಯ ನಾಯಕರಿಗೆ ಸೂಚ್ಯ ಸಂದೇಶ ರವಾನಿಸಿತ್ತು. ರಾಜ್ಯ ಸರ್ಕಾರ ಕೂಡ ಯಾತ್ರೆಗೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳುವ ಸಿದ್ಧತೆಗಳನ್ನು ನಡೆಸಿತ್ತು. ಜತೆಗೆ, ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾತ್ರೆ ನಿಲ್ಲಿಸುವಂತೆ ಮನವಿ ಮಾಡಿ ಕಾಂಗ್ರೆಸ್‌ ನಾಯಕರಿಗೆ ಪತ್ರವನ್ನು ಬರೆದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಹಿರಿಯ ನಾಯಕರು ಹಾಗೂ ಶಾಸಕರ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಗೊಂಡರು. ಹಾಗಾದರೆ ಈ ಯುದ್ಧದಲ್ಲಿ ಗೆದ್ದಿದ್ಯಾರು..? ಸೋತಿದ್ಯಾರು..? 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more