Mekedatu Padayatre: ರಾಮನಗರದಿಂದ ಹೊರಟ ಪಾದಯಾತ್ರೆ, 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ

Feb 27, 2022, 2:59 PM IST

ಬೆಂಗಳೂರು (ಫೆ. 27): ಮೇಕೆದಾಟು-(Mekedatu) 2.0 ಗೆ ಚಾಲನೆ ಸಿಕ್ಕಿದೆ. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಪಾದಯಾತ್ರೆಗೆ ಡಿಕೆಶಿ ಚಾಲನೆ ಕೊಟ್ಟಿದ್ದಾರೆ. ಇಂದು 16 ಕಿಮೀ ಪಾದಯಾತ್ರೆ ನಡೆಸಲಿದ್ದಾರೆ. 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಒಟ್ಟು 79.8 ಕಿಮೀ ದೂರ ಸಾಗಲಿದ್ದಾರೆ ಕಾಂಗ್ರೆಸ್ಸಿಗರು. ಇಂದು 16 ಕಿಮೀ ನಡೆಯಲಿದ್ದಾರೆ. ನಾಳೆ ಸಂಜೆ ಬಿಡದಿಯಲ್ಲಿ ಪಾದಯಾತ್ರೆ ಅಂತ್ಯಗೊಳ್ಳಲಿದೆ. ಪಾದಯಾತ್ರೆಯಲ್ಲಿ ಭಾಗವಹಿಸುವವರ ಮೇಲೆ ನಿಗಾ ಇಡಲು ದಾರಿಯುದ್ದಕ್ಕೂ ಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲಲ್ಲಿ ಕುಡಿಯುವ ನೀರು, ತಂಗುವ ವ್ಯವಸ್ಥೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾತನಾಡಿದರು.