'ಗೋಮೂತ್ರ ಕುಡಿಯುವವರ ಬುದ್ದಿ ಹತ್ಯೆಯಾಗಿದೆ ಎಂದಿದ್ದ ಸಾವರ್ಕರ್!'

'ಗೋಮೂತ್ರ ಕುಡಿಯುವವರ ಬುದ್ದಿ ಹತ್ಯೆಯಾಗಿದೆ ಎಂದಿದ್ದ ಸಾವರ್ಕರ್!'

Published : Aug 25, 2022, 05:15 PM IST

ಸಾವರ್ಕರ್‌ ಗೋಮಾಂಸ ತಿನ್ನುತ್ತಿದ್ದರು. ಬೇರೆಯರು ತಿನ್ನೋದಕ್ಕೂ ಅವರು ಬೇಸರ ಪಟ್ಟುಕೊಂಡಿರಲಿಲ್ಲ. ಯಾವುದೇ ಆಕ್ಷೇಪ ಮಾಡುತ್ತಿರಲಿಲ್ಲ. ಗೋವು ಎತ್ತಿಗೆ ಮಾತ್ರ ತಾಯಿ ಹಿಂದುಗಳಿಗಲ್ಲ ಎನ್ನುವುದು ಅವರ ಮಾತಾಗಿತ್ತು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಬೆಂಗಳೂರು (ಆ. 25): ಸಾವರ್ಕರ್‌ ಹಿಂದುತ್ವದ ಪಿತಾಮಹ ಎಂದು ಆರ್‌ಎಸ್ಎಸ್ ಹಾಗೂ ಬಿಜೆಪಿಯವರು ಹೇಳ್ತಾರೆ. ಆದರೆ, ನಾನು ಹೇಳಿದ ಹಾಗೆ ಅವರು ವಿಚಾರವಾದಿಗಳು, ನಾಸ್ತಿಕರು ಆಗಿದ್ದರು. ಆದರೆ, ಅಚ್ಚರಿಯೆಂದರೆ, ಅವರು ಎಂದಿಗೂ ಗೋವನ್ನು ಮಾತೆ ಎಂದು ಪೂಜೆ ಮಾಡುತ್ತಿರಲಿಲ್ಲ. ಗೋವು ಪವಿತ್ರವಲ್ಲ ಎಂದು ಅವರು ನಂಬಿದ್ದರು ಎಂದು ಕಾಂಗ್ರೆಸ್‌ ನಾಯಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗೋವು ಒಂದು ಉಪಯುಕ್ತವಾದ ಪ್ರಾಣಿ ಎಂದಷ್ಟೇ ಅವರು ಹೇಳಿದ್ದರು. ಗೋವು ಯಾರಿಗಾದರೂ ತಾಯಿ ಆಗಿದ್ದರೆ ಅದು ಎತ್ತಿಗೆ ಮಾತ್ರ. ಹಿಂದುಗಳಿಗಲ್ಲ ಎಂದು ಅವರು ಬರೆದಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಹಿಂದುಗಳ ಗೋಮಾತೆಯನ್ನು ಪೂಜೆ ಮಾಡೋದನ್ನು ಬಿಟ್ಟು, ಸೂಪರ್‌ ಹ್ಯೂಮನ್‌ ಕ್ವಾಲಿಟಿ ಇರುವವರನ್ನು ಪೂಜೆ ಮಾಡಿ ಎಂದು ಸಾವರ್ಕರ್‌ ಹೇಳಿದ್ದರು.

ಸಾವರ್ಕರ್‌ ಅಂದ್ರೆ, ತತ್ವ, ತರ್ಕ, ತ್ಯಾಗದ ರೂಪ.. ಅಟಲ್‌ ಹೇಳಿದ್ದ ಮಾತುಗಳಲ್ಲಿತ್ತು ಮಹಾನ್‌ ನಾಯಕನ ನೋವು!

ಆದರೆ, ಈಗಿನ ಸರ್ಕಾರ ಕರೋನಾ ಬಂದಾಗ ಗೋಮೂತ್ರ ಕುಡಿಯಿರಿ ಅಂದ್ರು, ಸಗಣಿ ಬಳಸಿ ಅಂದ್ರು. ಆದರೆ, ಗೋಮೂತ್ರ ಕುಡಿಯುವವರ ಬುದ್ಧಿ ಹತ್ಯೆಯಾಗಿದೆ ಎಂದು ಸಾವರ್ಕರ್‌ ಅವರೇ ಬರೆದುಕೊಂಡಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more