'ಗೋಮೂತ್ರ ಕುಡಿಯುವವರ ಬುದ್ದಿ ಹತ್ಯೆಯಾಗಿದೆ ಎಂದಿದ್ದ ಸಾವರ್ಕರ್!'

'ಗೋಮೂತ್ರ ಕುಡಿಯುವವರ ಬುದ್ದಿ ಹತ್ಯೆಯಾಗಿದೆ ಎಂದಿದ್ದ ಸಾವರ್ಕರ್!'

Published : Aug 25, 2022, 05:15 PM IST

ಸಾವರ್ಕರ್‌ ಗೋಮಾಂಸ ತಿನ್ನುತ್ತಿದ್ದರು. ಬೇರೆಯರು ತಿನ್ನೋದಕ್ಕೂ ಅವರು ಬೇಸರ ಪಟ್ಟುಕೊಂಡಿರಲಿಲ್ಲ. ಯಾವುದೇ ಆಕ್ಷೇಪ ಮಾಡುತ್ತಿರಲಿಲ್ಲ. ಗೋವು ಎತ್ತಿಗೆ ಮಾತ್ರ ತಾಯಿ ಹಿಂದುಗಳಿಗಲ್ಲ ಎನ್ನುವುದು ಅವರ ಮಾತಾಗಿತ್ತು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಬೆಂಗಳೂರು (ಆ. 25): ಸಾವರ್ಕರ್‌ ಹಿಂದುತ್ವದ ಪಿತಾಮಹ ಎಂದು ಆರ್‌ಎಸ್ಎಸ್ ಹಾಗೂ ಬಿಜೆಪಿಯವರು ಹೇಳ್ತಾರೆ. ಆದರೆ, ನಾನು ಹೇಳಿದ ಹಾಗೆ ಅವರು ವಿಚಾರವಾದಿಗಳು, ನಾಸ್ತಿಕರು ಆಗಿದ್ದರು. ಆದರೆ, ಅಚ್ಚರಿಯೆಂದರೆ, ಅವರು ಎಂದಿಗೂ ಗೋವನ್ನು ಮಾತೆ ಎಂದು ಪೂಜೆ ಮಾಡುತ್ತಿರಲಿಲ್ಲ. ಗೋವು ಪವಿತ್ರವಲ್ಲ ಎಂದು ಅವರು ನಂಬಿದ್ದರು ಎಂದು ಕಾಂಗ್ರೆಸ್‌ ನಾಯಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗೋವು ಒಂದು ಉಪಯುಕ್ತವಾದ ಪ್ರಾಣಿ ಎಂದಷ್ಟೇ ಅವರು ಹೇಳಿದ್ದರು. ಗೋವು ಯಾರಿಗಾದರೂ ತಾಯಿ ಆಗಿದ್ದರೆ ಅದು ಎತ್ತಿಗೆ ಮಾತ್ರ. ಹಿಂದುಗಳಿಗಲ್ಲ ಎಂದು ಅವರು ಬರೆದಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಹಿಂದುಗಳ ಗೋಮಾತೆಯನ್ನು ಪೂಜೆ ಮಾಡೋದನ್ನು ಬಿಟ್ಟು, ಸೂಪರ್‌ ಹ್ಯೂಮನ್‌ ಕ್ವಾಲಿಟಿ ಇರುವವರನ್ನು ಪೂಜೆ ಮಾಡಿ ಎಂದು ಸಾವರ್ಕರ್‌ ಹೇಳಿದ್ದರು.

ಸಾವರ್ಕರ್‌ ಅಂದ್ರೆ, ತತ್ವ, ತರ್ಕ, ತ್ಯಾಗದ ರೂಪ.. ಅಟಲ್‌ ಹೇಳಿದ್ದ ಮಾತುಗಳಲ್ಲಿತ್ತು ಮಹಾನ್‌ ನಾಯಕನ ನೋವು!

ಆದರೆ, ಈಗಿನ ಸರ್ಕಾರ ಕರೋನಾ ಬಂದಾಗ ಗೋಮೂತ್ರ ಕುಡಿಯಿರಿ ಅಂದ್ರು, ಸಗಣಿ ಬಳಸಿ ಅಂದ್ರು. ಆದರೆ, ಗೋಮೂತ್ರ ಕುಡಿಯುವವರ ಬುದ್ಧಿ ಹತ್ಯೆಯಾಗಿದೆ ಎಂದು ಸಾವರ್ಕರ್‌ ಅವರೇ ಬರೆದುಕೊಂಡಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more