Feb 20, 2022, 10:01 AM IST
ಬೆಂಗಳೂರು (ಫೆ. 20): ರಾಷ್ಟ್ರಧ್ವಜದ (Flag Row) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ (EShwarappa) ವಜಾಕ್ಕೆ ಆಗ್ರಹಿಸಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ 4 ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟವನ್ನು ಸೋಮವಾರದಿಂದ ಸದನದ ಹೊರಗೂ ಒಯ್ಯಲು ತೀರ್ಮಾನಿಸಿದ್ದು, ರಾಜ್ಯದ ಪ್ರತಿ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಹೋರಾಟ ನಡೆಸುವಂತೆ ತನ್ನ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ತಾಲ್ಲೂಕು ಕಾಂಗ್ರೆಸ್ ಘಟಕಗಳಿಗೆ ಸೂಚನೆ ನೀಡಿದೆ.