ಕಾಂಗ್ರೆಸ್​ ಸರ್ಕಾರಕ್ಕೂ ಕಮಿಷನ್ ಕಳಂಕ: ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

ಕಾಂಗ್ರೆಸ್​ ಸರ್ಕಾರಕ್ಕೂ ಕಮಿಷನ್ ಕಳಂಕ: ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

Published : Jan 14, 2025, 11:40 AM ISTUpdated : Jan 14, 2025, 11:55 AM IST

ಅನುದಾನ ಬಿಡುಗಡೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಮತ್ತೊಂದೆಡೆ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ನಿರ್ಣಾಯಕ ಹೋರಾಟಕ್ಕೆ ಮುನ್ನಡಿ ಬರೆದಿದೆ. ಬಾಕಿ ಬಿಲ್​ ಬಿಡುಗಡೆಗಾಗಿ ಪತ್ರ ಸಮರದ ಕಹಳೆ ಮೊಳಗಿಸಿದೆ. ಬಾಕಿ ಬಿಲ್ ಬಗ್ಗೆ ಗಮನಕ್ಕೆ ತಂದರೂ ಕ್ರಮ ಆಗಿಲ್ಲವೆಂದು ಗುತ್ತಿಗೆದಾರರು ಆಕ್ರೋಶ ಹೊರಹಾಕಿದ್ದಾರೆ. 

ಬೆಂಗಳೂರು(ಜ.14): ಬಾಕಿ ಬಿಲ್​​ಗಾಗಿ ಗುತ್ತಿಗೆದಾರರ ಸಂಘ ಪತ್ರ ಸಮರಕ್ಕಿಳಿದಿದೆ. ಹಣ ಬಿಡುಗಡೆಗೆ 7 ದಿನಗಳ ಡೆಡ್​​ಲೈನ್​ ನೀಡಿದೆ. ಇನ್ನು ಕಾಂಗ್ರೆಸ್​ ಸರ್ಕಾರಕ್ಕೂ ಕಮಿಷನ್ ಕಳಂಕ ಅಂಟಿಕೊಂಡಿದೆ. 

ಅನುದಾನ ಬಿಡುಗಡೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಮತ್ತೊಂದೆಡೆ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ನಿರ್ಣಾಯಕ ಹೋರಾಟಕ್ಕೆ ಮುನ್ನಡಿ ಬರೆದಿದೆ. ಬಾಕಿ ಬಿಲ್​ ಬಿಡುಗಡೆಗಾಗಿ ಪತ್ರ ಸಮರದ ಕಹಳೆ ಮೊಳಗಿಸಿದೆ. ಬಾಕಿ ಬಿಲ್ ಬಗ್ಗೆ ಗಮನಕ್ಕೆ ತಂದರೂ ಕ್ರಮ ಆಗಿಲ್ಲವೆಂದು ಗುತ್ತಿಗೆದಾರರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರದ ಸಪ್ತ ಸಚಿವರಿಗೆ ಪತ್ರ ಬರೆದಿರೋ ಗುತ್ತಿಗೆದಾರರ ಸಂಘ ಬಿಲ್​ ಬಿಡುಗಡೆಗಾಗಿ 7 ದಿನಗಳ ಡೆಡ್​ಲೈನ್​ ನೀಡಿದೆ. 7 ದಿನದೊಳಗೆ ಸಭೆ ಕರೆದು ನ್ಯಾಯ ಒದಗಿಸಬೇಕು. ಇಲ್ಲವಾದ್ರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತೆ ಅಂತಾ ಎಚ್ಚರಿಸಿದೆ. 

ಮೈ ಝುಂ ಎನ್ನಿಸೋ ಜಾದೂಗಳ ಹಿಂದಿರೋ ಗುಟ್ಟೆಲ್ಲಾ ರಟ್ಟು: ನೀವು ಮಾಡ್ಬೋದು ಸಖತ್ ಮ್ಯಾಜಿಕ್

ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರೋ ಡಿಸಿಎಂ ಡಿಕೆ ಶಿವಕುಮಾರ್​,  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ, ವಸತಿ ಸಚಿವ ಜಮೀರ್ ಅಹ್ಮದ್, ಸಣ್ಣ ನೀರಾವರಿ ಸಚಿವ ಎನ್​.ಎಸ್ ಬೋಸರಾಜುಗೆ ಪತ್ರ ಬರೆಯಲಾಗಿದೆ. ಹಾಗೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್​ ಗುಂಡೂರಾವ್​, ಸಮಾಜ ಕಲ್ಯಾಣ ಸಚಿವ ಎಚ್​.ಸಿ ಮಹದೇವಪ್ಪ, ಪೌರಾಡಳಿತ ಸಚಿವ ರಹೀಂ ಖಾನ್​​ಗೂ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ

ಬಾಕಿ ಬಿಲ್​ಗಾಗಿ ಜಟಾಪಟಿಗಿಳಿದಿರೋ ಗುತ್ತಿಗೆದಾರರ ಸಂಘ ಸರ್ಕಾರದ ವಿರುದ್ಧ ಕಮಿಷನ್​ ಆರೋಪವನ್ನೂ ಮಾಡಿದೆ. 32 ಸಾವಿರ ಕೋಟಿ ಬಾಕಿ ಹಣ ಬರಬೇಕಿದೆ. ಒಡವೆ ಮಾರಾಟ ಮಾಡಿ ಕಾಂಟ್ರಾಕ್ಟ್ ಕೆಲಸ ಮಾಡಿದ್ದೇವೆ. ಹಣ ಬಿಡುಗಡೆಯಾಗದಿದ್ರೆ ನಮ್ಮ ಗತಿಯೇನು? ಗುತ್ತಿಗೆ ನೀಡಲು ಶಾಸಕರು ಶೇ. 15ರಷ್ಟು ಕಮಿಷನ್ ನೇರವಾಗಿ ಕೇಳುತ್ತಿದ್ದಾರೆ ಅಂತಾ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ್​ ಗಂಭೀರ ಆರೋಪ ಮಾಡಿದ್ದಾರೆ. 

ಮೈಸೂರಿನ ಫಾರ್ಮ್​ಹೌಸ್​ನಲ್ಲಿ ಸುಗ್ಗಿ ಸಂಭ್ರಮ: ಕಿಚ್ಚು ಹಾಯಿಸಿ ಹೊಸದಾರಿ ಹಿಡಿಲು ದರ್ಶನ್ ಪ್ಲಾನ್

ಗುತ್ತಿಗೆದಾರರ ಬಾಕಿ ಬಿಲ್​ ಪಾವತಿ ವಿಚಾರವಾಗಿ ಕಾಂಗ್ರೆಸ್​-ಬಿಜೆಪಿ ನಾಯಕರ ಮಧ್ಯೆ ವಾಗ್ಯುದ್ಧ ಜೋರಾಗಿದೆ. ಬಿಜೆಪಿ ತನ್ನ ಅವಧಿಯಲ್ಲಿ ಅನುದಾನವಿಲ್ಲದಿದ್ರೂ ಕಾಮಗಾರಿ ಮಾಡಿದೆ. ಸಾಲ ಮಾಡಿ ತುಪ್ಪ ತಿಂದಿದೆ ಅಂತಾ ಸಚಿವ ಪ್ರಿಯಾಂಕ್​ ಖರ್ಗೆ ಚಾಟಿ ಬೀಸಿದ್ರೆ, ಬಿಲ್​ ಬಿಡುಗಡೆಗೆ ಸರ್ಕಾರದ ಬಳಿ ಹಣವೇ ಇಲ್ಲ ಅಂತಾ ಮಾಜಿ ಸಚಿವ ಅಶ್ವತ್ಥ್​ ನಾರಾಯಣ್​ ವ್ಯಂಗ್ಯವಾಡಿದ್ದಾರೆ. 

ಬಾಕಿ ಬಿಲ್ ಬಿಡುಗಡೆ​ ಸರ್ಕಾರ ಹಾಗೂ ಗುತ್ತಿಗೆದಾರರ ನಡುವೆ ನಾ ಕೋಡೆ ನೀ ಬಿಡೆ ಎನ್ನುವಂತಾಗಿದೆ. 32 ಸಾವಿರ ಕೋಟಿ ಬಾಕಿ ಬಿಲ್​ಗಾಗಿ ಗುತ್ತಿಗೆದಾರರು ಲೆಟರ್​ ವಾರ್​ ಆರಂಭಿಸಿದ್ದಾರೆ. ಸಚಿವರ ಸ್ಪಂದಿಸದಿದ್ರೆ ಸಿಎಂಗೆ, ಸಿಎಂ ಸ್ಪಂದಿಸದಿದ್ರೆ ಪ್ರಧಾನಿಗೂ ಪತ್ರ ಬರೆಯುವುದಾಗಿ ಹೇಳಿದ್ದಾರೆ. ಸಾಲು ಸಾಲು ಹಗರಣಗಳಿಂದ ಕುಂದಿದ್ದ ಸರ್ಕಾರದ ವರ್ಚಸ್ಸಿಗೆ ಸದ್ಯ ಬಿಲ್ ಬಾಕಿ ಹಾಗೂ ಕಮಿಷನ್ ಆರೋಪ ಮತ್ತಷ್ಟು ಪೆಟ್ಟು ನೀಡಿವೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!