ಕಾಂಗ್ರೆಸ್​ ಸರ್ಕಾರಕ್ಕೂ ಕಮಿಷನ್ ಕಳಂಕ: ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

ಕಾಂಗ್ರೆಸ್​ ಸರ್ಕಾರಕ್ಕೂ ಕಮಿಷನ್ ಕಳಂಕ: ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

Published : Jan 14, 2025, 11:40 AM ISTUpdated : Jan 14, 2025, 11:55 AM IST

ಅನುದಾನ ಬಿಡುಗಡೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಮತ್ತೊಂದೆಡೆ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ನಿರ್ಣಾಯಕ ಹೋರಾಟಕ್ಕೆ ಮುನ್ನಡಿ ಬರೆದಿದೆ. ಬಾಕಿ ಬಿಲ್​ ಬಿಡುಗಡೆಗಾಗಿ ಪತ್ರ ಸಮರದ ಕಹಳೆ ಮೊಳಗಿಸಿದೆ. ಬಾಕಿ ಬಿಲ್ ಬಗ್ಗೆ ಗಮನಕ್ಕೆ ತಂದರೂ ಕ್ರಮ ಆಗಿಲ್ಲವೆಂದು ಗುತ್ತಿಗೆದಾರರು ಆಕ್ರೋಶ ಹೊರಹಾಕಿದ್ದಾರೆ. 

ಬೆಂಗಳೂರು(ಜ.14): ಬಾಕಿ ಬಿಲ್​​ಗಾಗಿ ಗುತ್ತಿಗೆದಾರರ ಸಂಘ ಪತ್ರ ಸಮರಕ್ಕಿಳಿದಿದೆ. ಹಣ ಬಿಡುಗಡೆಗೆ 7 ದಿನಗಳ ಡೆಡ್​​ಲೈನ್​ ನೀಡಿದೆ. ಇನ್ನು ಕಾಂಗ್ರೆಸ್​ ಸರ್ಕಾರಕ್ಕೂ ಕಮಿಷನ್ ಕಳಂಕ ಅಂಟಿಕೊಂಡಿದೆ. 

ಅನುದಾನ ಬಿಡುಗಡೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಮತ್ತೊಂದೆಡೆ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ನಿರ್ಣಾಯಕ ಹೋರಾಟಕ್ಕೆ ಮುನ್ನಡಿ ಬರೆದಿದೆ. ಬಾಕಿ ಬಿಲ್​ ಬಿಡುಗಡೆಗಾಗಿ ಪತ್ರ ಸಮರದ ಕಹಳೆ ಮೊಳಗಿಸಿದೆ. ಬಾಕಿ ಬಿಲ್ ಬಗ್ಗೆ ಗಮನಕ್ಕೆ ತಂದರೂ ಕ್ರಮ ಆಗಿಲ್ಲವೆಂದು ಗುತ್ತಿಗೆದಾರರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರದ ಸಪ್ತ ಸಚಿವರಿಗೆ ಪತ್ರ ಬರೆದಿರೋ ಗುತ್ತಿಗೆದಾರರ ಸಂಘ ಬಿಲ್​ ಬಿಡುಗಡೆಗಾಗಿ 7 ದಿನಗಳ ಡೆಡ್​ಲೈನ್​ ನೀಡಿದೆ. 7 ದಿನದೊಳಗೆ ಸಭೆ ಕರೆದು ನ್ಯಾಯ ಒದಗಿಸಬೇಕು. ಇಲ್ಲವಾದ್ರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತೆ ಅಂತಾ ಎಚ್ಚರಿಸಿದೆ. 

ಮೈ ಝುಂ ಎನ್ನಿಸೋ ಜಾದೂಗಳ ಹಿಂದಿರೋ ಗುಟ್ಟೆಲ್ಲಾ ರಟ್ಟು: ನೀವು ಮಾಡ್ಬೋದು ಸಖತ್ ಮ್ಯಾಜಿಕ್

ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರೋ ಡಿಸಿಎಂ ಡಿಕೆ ಶಿವಕುಮಾರ್​,  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ, ವಸತಿ ಸಚಿವ ಜಮೀರ್ ಅಹ್ಮದ್, ಸಣ್ಣ ನೀರಾವರಿ ಸಚಿವ ಎನ್​.ಎಸ್ ಬೋಸರಾಜುಗೆ ಪತ್ರ ಬರೆಯಲಾಗಿದೆ. ಹಾಗೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್​ ಗುಂಡೂರಾವ್​, ಸಮಾಜ ಕಲ್ಯಾಣ ಸಚಿವ ಎಚ್​.ಸಿ ಮಹದೇವಪ್ಪ, ಪೌರಾಡಳಿತ ಸಚಿವ ರಹೀಂ ಖಾನ್​​ಗೂ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ

ಬಾಕಿ ಬಿಲ್​ಗಾಗಿ ಜಟಾಪಟಿಗಿಳಿದಿರೋ ಗುತ್ತಿಗೆದಾರರ ಸಂಘ ಸರ್ಕಾರದ ವಿರುದ್ಧ ಕಮಿಷನ್​ ಆರೋಪವನ್ನೂ ಮಾಡಿದೆ. 32 ಸಾವಿರ ಕೋಟಿ ಬಾಕಿ ಹಣ ಬರಬೇಕಿದೆ. ಒಡವೆ ಮಾರಾಟ ಮಾಡಿ ಕಾಂಟ್ರಾಕ್ಟ್ ಕೆಲಸ ಮಾಡಿದ್ದೇವೆ. ಹಣ ಬಿಡುಗಡೆಯಾಗದಿದ್ರೆ ನಮ್ಮ ಗತಿಯೇನು? ಗುತ್ತಿಗೆ ನೀಡಲು ಶಾಸಕರು ಶೇ. 15ರಷ್ಟು ಕಮಿಷನ್ ನೇರವಾಗಿ ಕೇಳುತ್ತಿದ್ದಾರೆ ಅಂತಾ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ್​ ಗಂಭೀರ ಆರೋಪ ಮಾಡಿದ್ದಾರೆ. 

ಮೈಸೂರಿನ ಫಾರ್ಮ್​ಹೌಸ್​ನಲ್ಲಿ ಸುಗ್ಗಿ ಸಂಭ್ರಮ: ಕಿಚ್ಚು ಹಾಯಿಸಿ ಹೊಸದಾರಿ ಹಿಡಿಲು ದರ್ಶನ್ ಪ್ಲಾನ್

ಗುತ್ತಿಗೆದಾರರ ಬಾಕಿ ಬಿಲ್​ ಪಾವತಿ ವಿಚಾರವಾಗಿ ಕಾಂಗ್ರೆಸ್​-ಬಿಜೆಪಿ ನಾಯಕರ ಮಧ್ಯೆ ವಾಗ್ಯುದ್ಧ ಜೋರಾಗಿದೆ. ಬಿಜೆಪಿ ತನ್ನ ಅವಧಿಯಲ್ಲಿ ಅನುದಾನವಿಲ್ಲದಿದ್ರೂ ಕಾಮಗಾರಿ ಮಾಡಿದೆ. ಸಾಲ ಮಾಡಿ ತುಪ್ಪ ತಿಂದಿದೆ ಅಂತಾ ಸಚಿವ ಪ್ರಿಯಾಂಕ್​ ಖರ್ಗೆ ಚಾಟಿ ಬೀಸಿದ್ರೆ, ಬಿಲ್​ ಬಿಡುಗಡೆಗೆ ಸರ್ಕಾರದ ಬಳಿ ಹಣವೇ ಇಲ್ಲ ಅಂತಾ ಮಾಜಿ ಸಚಿವ ಅಶ್ವತ್ಥ್​ ನಾರಾಯಣ್​ ವ್ಯಂಗ್ಯವಾಡಿದ್ದಾರೆ. 

ಬಾಕಿ ಬಿಲ್ ಬಿಡುಗಡೆ​ ಸರ್ಕಾರ ಹಾಗೂ ಗುತ್ತಿಗೆದಾರರ ನಡುವೆ ನಾ ಕೋಡೆ ನೀ ಬಿಡೆ ಎನ್ನುವಂತಾಗಿದೆ. 32 ಸಾವಿರ ಕೋಟಿ ಬಾಕಿ ಬಿಲ್​ಗಾಗಿ ಗುತ್ತಿಗೆದಾರರು ಲೆಟರ್​ ವಾರ್​ ಆರಂಭಿಸಿದ್ದಾರೆ. ಸಚಿವರ ಸ್ಪಂದಿಸದಿದ್ರೆ ಸಿಎಂಗೆ, ಸಿಎಂ ಸ್ಪಂದಿಸದಿದ್ರೆ ಪ್ರಧಾನಿಗೂ ಪತ್ರ ಬರೆಯುವುದಾಗಿ ಹೇಳಿದ್ದಾರೆ. ಸಾಲು ಸಾಲು ಹಗರಣಗಳಿಂದ ಕುಂದಿದ್ದ ಸರ್ಕಾರದ ವರ್ಚಸ್ಸಿಗೆ ಸದ್ಯ ಬಿಲ್ ಬಾಕಿ ಹಾಗೂ ಕಮಿಷನ್ ಆರೋಪ ಮತ್ತಷ್ಟು ಪೆಟ್ಟು ನೀಡಿವೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!