ಹತ್ತಾರು ಕೃಷಿ ಅಧಿಕಾರಿಗಳ ಅಮಾನತು ಮಾಡಿದ ಸಚಿವ ಕೆ.ಎನ್. ರಾಜಣ್ಣ: ಕಾರಣ ಕೇಳಿದ್ರೆ ನೀವೂ ಬೆರಗಾಗ್ತೀರ!

ಹತ್ತಾರು ಕೃಷಿ ಅಧಿಕಾರಿಗಳ ಅಮಾನತು ಮಾಡಿದ ಸಚಿವ ಕೆ.ಎನ್. ರಾಜಣ್ಣ: ಕಾರಣ ಕೇಳಿದ್ರೆ ನೀವೂ ಬೆರಗಾಗ್ತೀರ!

Published : Aug 05, 2023, 05:24 PM IST

ಕೃಷಿ ಮತ್ತು ಸಹಕಾರ ಇಲಾಖೆಯಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮಕ್ಕೆ ಬಾರದೇ ಕಳ್ಳಾಟವಾಡಿದ್ದ ಕೃಷಿ ಇಲಾಖೆ ಅಧಿಕಾರಿಗಳನ್ನು ಸಚಿವ ಕೆ.ಎನ್. ರಾಜಣ್ಣ ಅಮಾನತು ಮಾಡಿದ್ದಾರೆ.

ಹಾಸನ (ಆ.05): ರಾಜ್ಯ ಸರ್ಕಾರದ ಸಹಕಾರ ಇಲಾಖೆ ಮತ್ತು ಮತ್ತು ಕೃಷಿ ಇಲಾಖೆಯಿಂದ ಆಯೋಜನೆ ಮಾಡಿದ್ದ ಕಾರ್ಯಕ್ರಮಕ್ಕೆ ಬಾರದೇ ಕಳ್ಳಾಟ ಆಡಿದ ಕೃಷಿ ಅಧಿಕಾರಿಗಳನ್ನು ಬೆಂಡೆತ್ತಿದ ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ಗೃರಾದವರನ್ನು ಅಮಾನತು ಮಾಡುವಂತೆ ಆದೇಶಿಸಿದರು.

ಹಾಸನ ನಗರದ ಅಂಬೇಡ್ಕರ್ ಭವನದ ಮುಂಭಾಗ ಶನಿವಾರ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮದ ವೇಳೆ ಕೆಳಹಂತದ ಅಧಿಕಾರಿಳು ಮಾತ್ರ ಹಾಜರಿದ್ದರು. ಆದರೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಪ್ರಮುಖ ಅಧಿಕಾರಿಗಳು ಸಹಕಾರಿ ಸಚಿವರ ಕಾರ್ಯಕ್ರಮಕ್ಕೆ ಹಾಜರಾಗಿರಿಲ್ಲ. ಇದರಿಂದ ಕೋಪಗೊಂಡ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು, ಕಾರ್ಯಕ್ರಮಕ್ಕೆ ಬಾರದ ಕೃಷಿ‌‌ ಇಲಾಖೆ ಅಧಿಕಾರಿಗಳ ಗರಂ ಆದರು.

ಈ ವೇಳೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ ಸಚಿವ ರಾಜಣ್ಣ, ಎಲ್ಲಿ ನಿಮ್ಮ ಇಲಾಖೆಯ ಡಿಡಿ, ಎಡಿ ಎಲ್ಲಾ ಎಲ್ಲಿ ಹೋದ್ರಯ್ಯಾ.? ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಧಿಕಾರಿ ಎಲ್ಲರೂ ಮೀಟಿಂಗ್ ಗೆ ಹೋಗಿದ್ದಾರೆ ಅಂತಾ ಉತ್ತರಿಸಿದರು. ಇದಕ್ಕೆ ಸಿಟ್ಟಾದ ಸಚಿವರು, ಹೇಯ್ ಸುಳ್ಳು ಹೇಳ್ತೀಯಾ.. ಇವತ್ತು ರಜೆ ದಿನ ಯಾವನ್ ಮೀಟಿಂಗ್ ಮಾಡ್ತಾನೆ. ಯಾವನ್ ಸಹಾಯಕ ನಿರ್ದೇಶಕ ಅವನು..? ಯಾವ ಊರಿಂದ ಬರ್ತಾನೆ..? ಎಲ್ಲಿ ಹೋದ್ರು ಎಲ್ಲಾ.. ಹೇ ಯಾರ್ರಿ.. ಕೃಷಿ ಇಲಾಖೆ ಅಧಿಕಾರಿಗಳ ನೆಗ್ಲಜೆನ್ಸಿ ಅಂತಾ ಸಸ್ಪೆಷನ್ ಗೆ ಬರೀರಿ ಯಾವಾನಾದ್ರೂ ಆಗಲಿ ಎಂದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more