ಆಂಬುಲೆನ್ಸ್ ಕೊರತೆ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

ಆಂಬುಲೆನ್ಸ್ ಕೊರತೆ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

Suvarna News   | Asianet News
Published : Jul 04, 2020, 11:46 AM IST

ಸಿಲಿಕಾನ್ ಸಿಟಿಯಲ್ಲಿ ಗಂಟೆ ಗಂಟೆಗೆ ಕೊರೋನಾಗೆ ಒಬ್ಬೊಬ್ಬರು ಬಲಿಯಾಗುತ್ತಿದ್ದರೂ ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ಶುಕ್ರವಾರ(ಜು.03)ದಂದು ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬರು ಪ್ರಾಣಬಿಟ್ಟಿದ್ದರು. ಆಂಬುಲೆನ್ಸ್‌ಗೆ ಕರೆ ಮಾಡಿ 4 ಗಂಟೆ ಕಳೆದರೂ ಯಾರೂ ಬರಲಿಲ್ಲ.
 

ಬೆಂಗಳೂರು(ಜು.04): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸಾವಿನ ರಣಕೇಕೆ ಹೆಚ್ಚಾಗುತ್ತಲೇ ಇದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸೋಂಕಿತರು ದಿನಂಪ್ರತಿ ಬಲಿಯಾಗುತ್ತಿದ್ದಾರೆ. ಮುಂಬೈ, ದೆಹಲಿ ಹಾದಿಯಲ್ಲೇ ಬೆಂಗಳೂರು ಸಾಗುತ್ತಿದೆಯಾ ಎನ್ನುವ ಅನುಮಾನ ಶುರುವಾಗ ತೊಡಗಿದೆ.

ಸಿಲಿಕಾನ್ ಸಿಟಿಯಲ್ಲಿ ಗಂಟೆ ಗಂಟೆಗೆ ಕೊರೋನಾಗೆ ಒಬ್ಬೊಬ್ಬರು ಬಲಿಯಾಗುತ್ತಿದ್ದರೂ ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ಶುಕ್ರವಾರ(ಜು.03)ದಂದು ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬರು ಪ್ರಾಣಬಿಟ್ಟಿದ್ದರು. ಆಂಬುಲೆನ್ಸ್‌ಗೆ ಕರೆ ಮಾಡಿ 4 ಗಂಟೆ ಕಳೆದರೂ ಯಾರೂ ಬರಲಿಲ್ಲ. ಕೊನೆಗೆ ನರಳಿ ನರಳಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ.

ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಅಮಾಯಕರು ಪ್ರಾಣ ಚಲ್ಲುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಂದಿದ್ದರೆ ಈ ವ್ಯಕ್ತಿ ಬದುಕುಳಿಯುತ್ತಿದ್ದರು. ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೆಷ್ಟು ಜನ ಬಲಿಯಾಗಬೇಕೋ ಗೊತ್ತಿಲ್ಲ. ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!