ಆಂಬುಲೆನ್ಸ್ ಕೊರತೆ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

ಆಂಬುಲೆನ್ಸ್ ಕೊರತೆ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

Suvarna News   | Asianet News
Published : Jul 04, 2020, 11:46 AM IST

ಸಿಲಿಕಾನ್ ಸಿಟಿಯಲ್ಲಿ ಗಂಟೆ ಗಂಟೆಗೆ ಕೊರೋನಾಗೆ ಒಬ್ಬೊಬ್ಬರು ಬಲಿಯಾಗುತ್ತಿದ್ದರೂ ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ಶುಕ್ರವಾರ(ಜು.03)ದಂದು ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬರು ಪ್ರಾಣಬಿಟ್ಟಿದ್ದರು. ಆಂಬುಲೆನ್ಸ್‌ಗೆ ಕರೆ ಮಾಡಿ 4 ಗಂಟೆ ಕಳೆದರೂ ಯಾರೂ ಬರಲಿಲ್ಲ.
 

ಬೆಂಗಳೂರು(ಜು.04): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸಾವಿನ ರಣಕೇಕೆ ಹೆಚ್ಚಾಗುತ್ತಲೇ ಇದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸೋಂಕಿತರು ದಿನಂಪ್ರತಿ ಬಲಿಯಾಗುತ್ತಿದ್ದಾರೆ. ಮುಂಬೈ, ದೆಹಲಿ ಹಾದಿಯಲ್ಲೇ ಬೆಂಗಳೂರು ಸಾಗುತ್ತಿದೆಯಾ ಎನ್ನುವ ಅನುಮಾನ ಶುರುವಾಗ ತೊಡಗಿದೆ.

ಸಿಲಿಕಾನ್ ಸಿಟಿಯಲ್ಲಿ ಗಂಟೆ ಗಂಟೆಗೆ ಕೊರೋನಾಗೆ ಒಬ್ಬೊಬ್ಬರು ಬಲಿಯಾಗುತ್ತಿದ್ದರೂ ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ಶುಕ್ರವಾರ(ಜು.03)ದಂದು ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬರು ಪ್ರಾಣಬಿಟ್ಟಿದ್ದರು. ಆಂಬುಲೆನ್ಸ್‌ಗೆ ಕರೆ ಮಾಡಿ 4 ಗಂಟೆ ಕಳೆದರೂ ಯಾರೂ ಬರಲಿಲ್ಲ. ಕೊನೆಗೆ ನರಳಿ ನರಳಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ.

ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಅಮಾಯಕರು ಪ್ರಾಣ ಚಲ್ಲುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಂದಿದ್ದರೆ ಈ ವ್ಯಕ್ತಿ ಬದುಕುಳಿಯುತ್ತಿದ್ದರು. ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೆಷ್ಟು ಜನ ಬಲಿಯಾಗಬೇಕೋ ಗೊತ್ತಿಲ್ಲ. ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!