ಆಂಬುಲೆನ್ಸ್ ಕೊರತೆ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

ಆಂಬುಲೆನ್ಸ್ ಕೊರತೆ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

Suvarna News   | Asianet News
Published : Jul 04, 2020, 11:46 AM IST

ಸಿಲಿಕಾನ್ ಸಿಟಿಯಲ್ಲಿ ಗಂಟೆ ಗಂಟೆಗೆ ಕೊರೋನಾಗೆ ಒಬ್ಬೊಬ್ಬರು ಬಲಿಯಾಗುತ್ತಿದ್ದರೂ ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ಶುಕ್ರವಾರ(ಜು.03)ದಂದು ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬರು ಪ್ರಾಣಬಿಟ್ಟಿದ್ದರು. ಆಂಬುಲೆನ್ಸ್‌ಗೆ ಕರೆ ಮಾಡಿ 4 ಗಂಟೆ ಕಳೆದರೂ ಯಾರೂ ಬರಲಿಲ್ಲ.
 

ಬೆಂಗಳೂರು(ಜು.04): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸಾವಿನ ರಣಕೇಕೆ ಹೆಚ್ಚಾಗುತ್ತಲೇ ಇದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸೋಂಕಿತರು ದಿನಂಪ್ರತಿ ಬಲಿಯಾಗುತ್ತಿದ್ದಾರೆ. ಮುಂಬೈ, ದೆಹಲಿ ಹಾದಿಯಲ್ಲೇ ಬೆಂಗಳೂರು ಸಾಗುತ್ತಿದೆಯಾ ಎನ್ನುವ ಅನುಮಾನ ಶುರುವಾಗ ತೊಡಗಿದೆ.

ಸಿಲಿಕಾನ್ ಸಿಟಿಯಲ್ಲಿ ಗಂಟೆ ಗಂಟೆಗೆ ಕೊರೋನಾಗೆ ಒಬ್ಬೊಬ್ಬರು ಬಲಿಯಾಗುತ್ತಿದ್ದರೂ ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ಶುಕ್ರವಾರ(ಜು.03)ದಂದು ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬರು ಪ್ರಾಣಬಿಟ್ಟಿದ್ದರು. ಆಂಬುಲೆನ್ಸ್‌ಗೆ ಕರೆ ಮಾಡಿ 4 ಗಂಟೆ ಕಳೆದರೂ ಯಾರೂ ಬರಲಿಲ್ಲ. ಕೊನೆಗೆ ನರಳಿ ನರಳಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ.

ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಅಮಾಯಕರು ಪ್ರಾಣ ಚಲ್ಲುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಂದಿದ್ದರೆ ಈ ವ್ಯಕ್ತಿ ಬದುಕುಳಿಯುತ್ತಿದ್ದರು. ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೆಷ್ಟು ಜನ ಬಲಿಯಾಗಬೇಕೋ ಗೊತ್ತಿಲ್ಲ. ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!