ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

Published : Jul 30, 2023, 09:36 AM IST

ಮೀಟರ್‌ನಲ್ಲಿ ಹೆಸರು ಬದಲಾಯಿಸಲು ಭಾರೀ ಸಂಖ್ಯೆಯಲ್ಲಿ ಅರ್ಜಿ
ಆಧಾರ್‌ ಕಾರ್ಡ್‌ಗೆ ನೀಡಿರುವ ಮೊಬೈಲ್ ಸಂಖ್ಯೆ ಅಲಭ್ಯವಾಗಿದೆ
ಎಸ್ಕಾಂಗಳಲ್ಲಿ ಕೂಡಲೇ ಹೆಸರು ಬದಲಾವಣೆ ಮಾಡುವುದು ಅಸಾಧ್ಯ

ಬೆಂಗಳೂರು: ಗೃಹಜ್ಯೋತಿ ಯೋಜನೆಯ (GruhaJyoti Yojana) ಅಧಿಕೃತ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 1 ಮಂಗಳವಾರದಿಂದ ಉಚಿತ ವಿದ್ಯುತ್ ಬಿಲ್(Free Current bill) ಬರಲಿದೆ. ಇದು ಜುಲೈ ತಿಂಗಳಲ್ಲಿ ನೋಂದಣಿ ಮಾಡಿಸಿದ್ದವರಿಗೆ ಮಾತ್ರ ಜೀರೋ ಬಿಲ್(Zero bill) ಬರಲಿದೆ. ಜುಲೈ 25ರವರೆಗೆ ಅರ್ಜಿ ಸಲ್ಲಿಸಿರುವವರಿಗೆ ಮಾತ್ರ ಗೃಹಜ್ಯೋತಿ ಲಾಭ ಸಿಗಲಿದ್ದು, ಜುಲೈ 25ರ ನಂತರ ನೋಂದಣಿ ಮಾಡಿದವರಿಗೆ ಆಗಸ್ಟ್‌ ತಿಂಗಳಿನಲ್ಲಿ ಉಚಿತ ಬಿಲ್ ಬರುವುದಿಲ್ಲ. ಇಲ್ಲಿವರೆಗೆ 1,18,50,474 ಫಲಾನುಭವಿಗಳಿಂದ ಗೃಹಜ್ಯೋತಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಎರಡೂವರೆ ಕೋಟಿ ಫಲಾನುಭವಿಗಳಲ್ಲಿ ಶೇ.60ರಷ್ಟು ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಶೇ.40ರಷ್ಟು ಜನ ಅರ್ಜಿ ಸಲ್ಲಿಸುವುದು ಬಾಕಿ ಇದೆ. ಜುಲೈ 25ರ ನಂತರ ಅರ್ಜಿ ಸಲ್ಲಿಸಿದವರಿಗೆ ಸೆಪ್ಟೆಂಬರ್ ಬಿಲ್ ಫ್ರೀ ಸಿಗಲಿದೆ.ಆರ್.ಆರ್.ನಂಬರ್‌ನಲ್ಲಿರುವ ಹೆಸರು, ಆಧಾರ್ ಹೆಸರು ಮ್ಯಾಚ್ ಆಗ್ತಿಲ್ಲ. ಶೇ.25ರಷ್ಟು ಕರೆಂಟ್ ಮೀಟರ್ ಪೂರ್ವಿಕರ ಹೆಸರಿನಲ್ಲಿದೆ. ಮೃತಪಟ್ಟಿರುವವರ ಹೆಸರಿನಲ್ಲಿರುವ ಮೀಟರ್‌ಗಳೇ ಹೆಚ್ಚು. ಬಹುತೇಕ ಮಾಲೀಕರಿಗೆ ಮಾಲೀಕರ ಕಲಂನಲ್ಲಿ ಅರ್ಜಿ ಸಲ್ಲಿಸಲಾಗ್ತಿಲ್ಲ. ಮೃತಪಟ್ಟ ಹಿರಿಯರ ಹೆಸರಿನಲ್ಲಿ ಮೀಟರ್ ಇರುವುದರಿಂದ ಸಮಸ್ಯೆಯಾಗುತ್ತಿದೆ.

ಇದನ್ನೂ ವೀಕ್ಷಿಸಿ:  ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more