ಕಮಿಷನ್ ದಂಧೆಗೆ ಸಂತೋಷ್‌ ಪಾಟೀಲ್‌ ಬಲಿ, ಇತರ ಗುತ್ತಿಗೆದಾರರ ಕಥೆಯೇನು ನೋಡಿ.!

ಕಮಿಷನ್ ದಂಧೆಗೆ ಸಂತೋಷ್‌ ಪಾಟೀಲ್‌ ಬಲಿ, ಇತರ ಗುತ್ತಿಗೆದಾರರ ಕಥೆಯೇನು ನೋಡಿ.!

Published : Apr 16, 2022, 06:24 PM IST

ರಾಜ್ಯ ಸರ್ಕಾರದ ಮೇಲೆ ಕಮೀಷನ್ ಅರೋಪ ಹೊರಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಗಾಗಲೇ ಬಸವರಾಜ ಬೊಮ್ಮಾಯಿ ಸರ್ಕಾರದ ಒಂದು ವಿಕೆಟ್ ಅನ್ನು ಉರುಳಿಸಿದೆ. ಕಮೀಷನ್ ದಂಧೆಗೆ ಸಂತೋಷ್ ಪಾಟೀಲ್ ಏನೋ ಬಲಿಯಾದ್ರು, ಹಾಗಾದ್ರೆ ಉಳಿದ ಗುತ್ತಿಗೆದಾರರ ಕಥೆಯೇನು?

ಬೆಂಗಳೂರು (ಏ.16): ಕ್ಲಾಸ್ 1 ಗುತ್ತಿಗೆದಾರ ಸಂತೋಷ್ ಪಾಟೀಲ್ (Santosh Patil) ಆತ್ಮಹತ್ಯೆ (Suicide) ವಿಚಾರ ರಾಜ್ಯ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ರಾಜ್ಯ ಸರ್ಕಾರದ ಮೇಲೆ ಕಮೀಷನ್ ಆರೋಪ ಹೊರಿಸಿದ್ದ ಸಂತೋಷ್ ಪಾಟೀಲ್, ಆತ್ಮಹತ್ಯೆಯ ಬೆನ್ನಲ್ಲಿಯೇ ತಮ್ಮ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ವ್ಯಾಟ್ಸ್ ಆಪ್ ಮೆಸೇಜ್ ಕೂಡ ಮಾಡಿದ್ದರು. ಹೀಗಾಗಿ ಈಶ್ವರಪ್ಪ ಅವರ ತಲೆದಂಡ ಕೂಡ ಆಗಿದೆ.

ಇನ್ನು ಈಶ್ವರಪ್ಪ (K S Eshwarappa) ಅವರ ಮೇಲಿನ ಭ್ರಷ್ಟಾಚಾರದ ಕುರಿತಾಗಿ ಸಂತೋಷ್ ಪಾಟೀಲ್ ಪ್ರಧಾನಿ ನರೇಂದ್ರ ಮೋದಿ (Prime Minister) ಅವರಿಗೂ ಪತ್ರ ಬರೆದಿದ್ದರು. ಇದಲ್ಲದೆ, ರಾಜ್ಯ ಗುತ್ತಿಗೆದಾರರ ಸಂಘ ಕೂಡ, ರಾಜ್ಯದಲ್ಲಿ ಯಾವುದೇ ಗುತ್ತಿಗೆಗೂ 40 ಪರ್ಸೆಂಟ್ ಕಮೀಷನ್ ಕೊಡಬೇಕು ಎಂದು ಪತ್ರ ಬರೆದಿತ್ತು.

Suicide Case: ಸಂತೋಷ್ ಪಾಟೀಲ್ ಸಾವಿಗೆ ಕಾರಣವಾದ ವಿಷ ಯಾವುದು ಗೊತ್ತಾ ?

ನಮ್ಮ ಕವರ್ ಸ್ಟೋರಿ ತಂಡ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಪರಿಶೀಲನೆ ಮಾಡಲು ತೆರಳಿತ್ತು. ಅಲ್ಲಿದ್ದ ಗುತ್ತಿಗೆದಾರರ ಬಳಿ, ವರ್ಕ್ ಆರ್ಡರ್ ಇದ್ಯಾ ಎಂದು ಕೇಳಿದ್ದಕ್ಕೆ ತಬ್ಬಿಬ್ಬಾಗಿದ್ದರು. ಯಾಕೆಂದರೆ, ಅಲ್ಲಿದ್ದವರೆಲ್ಲರೂ ಸಬ್ ಕಂಟ್ರಾಕ್ಟರ್ ಗಳು. ಅಸಲಿಗೆ ಗುತ್ತಿಗೆ ಕೆಲಸದಲ್ಲಿ ಆಗುತ್ತಿರುವುದು ಏನು ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more