ಟೊಯೋಟಾ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ನಡುವಿನ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದ್ದು, ಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ.
ಬೆಂಗಳೂರು (ಫೆ. 20): ಟೊಯೋಟಾ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ನಡುವಿನ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದ್ದು, ಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ.
ಕಳೆದ 20 ವರ್ಷಗಳಿಂದ ಸಂಸ್ಥೆಗಾಗಿ ದುಡಿದು ಕ್ವಾಲಿಟಿ ಉತ್ಪಾದನೆ ನೀಡಿದ್ದೇವೆ. ಮುಂದೆಯೂ ದುಡಿಯಲು ಸಿದ್ಧರಿದ್ದೇವೆ. ಆದರೆ ಸಂಸ್ಥೆಯಲ್ಲಿ ಉತ್ಪಾದನೆಯ ಹೆಸರಲ್ಲಿ ಕಾರ್ಮಿಕರ ಶೋಷಣೆ ನಡೆಯುತ್ತಿದೆ, ಅಧಿಕ ಕಾರ್ಯಭಾರ ಒತ್ತಡದಿಂದ ಕಾರ್ಮಿಕರು ತೀವ್ರ ದೈಹಿಕ ಮತ್ತು ಮಾನಸಿಕ ಯಾತನೆ ಅನುಭವಿಸುವಂತಾಗಿದೆ. ಆಡಳಿತ ಮಂಡಳಿ ಸದ್ಯ ಕಾರ್ಮಿಕರ ಸಮಸ್ಯೆ ಕೇಳುವ ಸ್ಥಿತಿಯಲ್ಲಿಲ್ಲ, ಸಮಸ್ಯೆಗಳ ಪರಿಹಾರಕ್ಕೆ ಸಮಿತಿ ರಚನೆ ಮಾಡಬೇಕು. 74 ಜನ ಕಾರ್ಮಿಕರ ಸಸ್ಪೆಂಡ್ ಆದೇಶವನ್ನು ಹಿಂಪಡೆಯಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ನಡೆಸಿದಾಗ, ಕೆಲವು ವಿಚಾರಗಳು ಹೊರಬಂದಿವೆ.