ಕೊರೊನಾ ಸೋಂಕು ಹೆಚ್ಚಳ: ಮತ್ತೆ ಲಾಕ್‌ಡೌನ್ ಸುಳಿವು ಕೊಟ್ಟ ಸಿಎಂ

Apr 12, 2021, 1:44 PM IST

ಬೆಂಗಳೂರು (ಏ. 12): ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿಗದೇ, ಒಂದೇ ಸಮನೆ ಹೆಚ್ಚಾಗುತ್ತಿದೆ. ಒಂದೇ ದಿನ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದೆ. ಇದು ಲಾಕ್‌ಡೌನ್ ಭೀತಿಯನ್ನು ಹುಟ್ಟು ಹಾಕಿದೆ. 

ಒಂದೇ ದಿನ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್, ಶುರುವಾಗಿದೆ ಮತ್ತೆ ಲಾಕ್ಡೌನ್ ಭೀತಿ

ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ವಿಧಿಸಿದ್ದೇವೆ. ಜನರು ಸಹಕರಿಸದಿದ್ರೆ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗುತ್ತದೆ. ಇನ್ನು 4 ದಿನಗಳಲ್ಲಿ ಲಾಕ್‌ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ದಯವಿಟ್ಟು ಸಾರ್ವಜನಿಕರು ಕೊರೊನಾ ಗೈಡ್‌ಲೈನ್ಸ್ ಪಾಲಿಸಿ ಎಂದು ಸಿಎಂ ಮನವಿ ಮಾಡಿದ್ದಾರೆ.