ರಾಜಧಾನಿಯಲ್ಲಿ ಹೆಚ್ಚಾಗುತ್ತಿದೆ ಕೋವಿಡ್ 19: ಕುತೂಹಲ ಮೂಡಿಸಿದೆ ಸಿಎಂ ನಿರ್ಧಾರ

Jun 26, 2020, 11:26 AM IST

ಬೆಂಗಳೂರು (ಜೂ. 26): ರಾಜಧಾನಿ ಬೆಂಗಳೂರಲ್ಲಿ ಕೋವಿಡ್‌-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಗರ ವ್ಯಾಪ್ತಿಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನುಇಂದು ಕರೆದಿದ್ದಾರೆ.

ಸಿಎಂ ಗೃಹ ಕಚೇರಿ 2 ದಿನ ಸೀಲ್‌ಡೌನ್

ಬೆಂಗಳೂರು ನಗರದಲ್ಲಿ ಕೋವಿಡ್‌-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ನ ಶಾಸಕರು, ಸಂಸದರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿದ ಬಳಿಕ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ.