ಏರಿದ ಕೊರೋನಾ : ಆಗಸ್ಟ್ 15ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್?

Aug 12, 2021, 1:15 PM IST

ಬೆಂಗಳೂರು (ಆ.12) : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಆತಂಕ ಎದುರಾಗಿದ್ದು ಮತ್ತೆ ಲಾಕ್‌ಡೌನ್ ಮಾತುಗಳು ಕೇಳಿ ಬಂದಿದೆ. 

ಕರ್ನಾಟಕಕ್ಕೆ ಎದುರಾಯ್ತಾ 3ನೇ ಅಲೆ : ಮಕ್ಕಳಲ್ಲಿ ಹೆಚ್ಚಾದ ಸೋಂಕು

ಕೇರಳದಲ್ಲಿ ಸೋಂಕು ಏರಿದೆ. ಗಡಿ ಜಿಲ್ಲೆಗಳಲ್ಲೂ ಏರುತ್ತಲಿದೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ. ಈ ಬಾರಿಯೂ ಲಾಕ್‌ಡೌನ್‌ ಮಾಡೋದು ಫಿಕ್ಸ್ ಎನ್ನುವ ಮಾತು ಸಚಿವ ಆರ್.ಅಶೋಕ್ ಅವರ ಮಾತಿನಿಂದ  ತಿಳಿದು ಬಂದಿದೆ. ಆಗಸ್ಟ್ 15ರ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona