Apr 28, 2021, 3:21 PM IST
ಬೆಳಗಾವಿ (ಏ. 28): ರೈಲ್ವೇ ನಿಲ್ದಾಣಕ್ಕೆ ಬಂದಿಳಿಯುವ ಪ್ರಯಾಣಿಕರಿಗೆ ತಪಾಸಣೆಯೇ ಮಾಡುತ್ತಿಲ್ಲವಂತೆ. ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಹಳ್ಳಿ ಹಳ್ಳಿಗೂ ಕೊರೊನಾ ಆತಂಕ ಶುರುವಾಗಿದೆ. ಮಹಾರಾಷ್ಟ್ರದಿಂದ ಬೆಳಗಾವಿಗೆ ಕಾರ್ಮಿಕರು ಬರುತ್ತಿದ್ದಾರೆ. ನಿನ್ನೆಯಷ್ಟೇ ಗೋಕಾಕ್ಗೆ ಬಂದಿರುವ 6 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ. ಇವರ ನಿರ್ಲಕ್ಷ್ಯದಿಂದ ಹಳ್ಳಿಗಳಲ್ಲೂ ಕೊರೊನಾ ಸೋಂಕು ಹೆಚ್ಚಳದ ಆತಂಕ ಶುರುವಾಗಿದೆ.