ಕೊರೋನಾ ಗುಣಮುಖರಾದವರಿಗೆ ಶುರುವಾಗಿದೆ ಹೊಸ ಟೆನ್ಷನ್.!

Aug 17, 2021, 5:52 PM IST

ಬೆಂಗಳೂರು (ಆ. 17): ಕೋವಿಡ್ ಸೋಂಕಿನಿಂದ ಹೊರ ಬಂದ ವ್ಯಕ್ತಿ ಗಳಲ್ಲಿ ಕ್ಷಯ ರೋಗ ಪತ್ತೆಯಾಗುತ್ತಿದೆ. ಹಾಗಾಗಿ ಗುಣಮುಖರಾದವರು ಕ್ಷಯ ರೋಗ ಪರೀಕ್ಷೆ ಮಾಡಿಸಿಕೊಳ್ಳಿ  ಎಂದು ಸಚಿವ ಡಾ. ಸುಧಾಕರ್ ಹೇಳಿದರು. 

ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ ಲಸಿಕೆ ವಿತರಣೆ ಇಳಿಮುಖ

ರಾಜ್ಯದಲ್ಲಿ 28 ಲಕ್ಷಕ್ಕೂ ಹೆಚ್ಚು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಸಾಮಾನ್ಯವಾಗಿ ಕ್ಷಯರೋಗ ಶ್ವಾಸಕೋಶದ ಸೋಂಕಿನಿಂದ ಬರುತ್ತದೆ. ಕೋವಿಡ್ ಕೂಡಾ ಶ್ವಾಸಕೋಶಕ್ಕೆ ಹಾನಿ ಮಾಡುತ್ತದೆ. ಕೋವಿಡ್ ನಿಂದ ಗುಣಮುಖ ಆದವರಿಗೆ ಕ್ಷಯರೋಗ ಭಾದಿಸುವ ಸಾಧ್ಯತೆ ಇರುವುದರಿಂದ ಇದೇ ತಿಂಗಳ 31 ರಿಂದ ಕ್ಷಯ ರೋಗ ಪತ್ತೆ ಮಾಡಲಾಗುತ್ತಿದೆ ಎಂದಿದ್ದಾರೆ.