ಕೋವಿಡ್ ಪರಿಹಾರಕ್ಕೆ (Covid Relief Fund) ನೀಡಿದ್ದ ಚೆಕ್ ಬೌನ್ಸ್ (Check Bounce) ಪ್ರಕರಣಕ್ಕೆ ಸಂಬಂಧಿಸಿದಂತೆ, ಏಷ್ಯಾನೆಟ್ ವರದಿ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಸುರಪುರ KGB ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕೇಸ್ ದಾಖಲಾಗಿದೆ.
ಬೆಂಗಳೂರು (ಜ. 22): ಕೋವಿಡ್ ಪರಿಹಾರಕ್ಕೆ (Covid Relief Fund) ನೀಡಿದ್ದ ಚೆಕ್ ಬೌನ್ಸ್ (Check Bounce) ಪ್ರಕರಣಕ್ಕೆ ಸಂಬಂಧಿಸಿದಂತೆ, ಏಷ್ಯಾನೆಟ್ ವರದಿ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಸುರಪುರ KGB ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕೇಸ್ ದಾಖಲಾಗಿದೆ.
ಬ್ಯಾಂಕಿನಲ್ಲಿ ತಾಂತ್ರಿಕ ಕಾರಣದಿಂದ ಗೊಂದಲ ಸೃಷ್ಟಿಯಾಗಿದ್ದು, ಒಂದೆರಡು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್.ರಾಗಪ್ರಿಯಾ ಸ್ಪಷ್ಟನೆ ನೀಡಿದ್ದಾರೆ. ಈ ಮಧ್ಯೆ, ಜಿಲ್ಲೆಯಲ್ಲಿ ಇದೇ ರೀತಿ ಕೋವಿಡ್ ಪರಿಹಾರದ ಚೆಕ್ ವಾಪಸಾದ ಇನ್ನಷ್ಟುಪ್ರಕರಣಗಳು ಬೆಳಕಿಗೆ ಬಂದಿದ್ದು, ಅಧಿಕಾರಿಗಳ ಎಡವಟ್ಟು ಕುರಿತು ಆಕ್ರೋಶ ವ್ಯಕ್ತವಾಗಿದೆ.