Covid-19: ರಾಜ್ಯದಲ್ಲಿ ರದ್ದಾಗುತ್ತಾ ನೈಟ್, ವೀಕೆಂಡ್ ಕರ್ಫ್ಯೂ?

Covid-19: ರಾಜ್ಯದಲ್ಲಿ ರದ್ದಾಗುತ್ತಾ ನೈಟ್, ವೀಕೆಂಡ್ ಕರ್ಫ್ಯೂ?

Suvarna News   | Asianet News
Published : Jan 20, 2022, 03:15 PM IST

ರಾಜ್ಯದಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ರದ್ದು ಮಾಡುವಂತೆ ಒತ್ತಡ
ನಾಳೆ ಸಿಎಂ ನೇತೃತ್ವದಲ್ಲಿ ನಡೆಯಲಿದೆ ಸಭೆ
ವೀಕೆಂಡ್ ಕರ್ಫ್ಯೂ ರದ್ದು ಬಗ್ಗೆ ಬಾಯ್ಬಿಡದ ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು (ಜ. 20): ರಾಜ್ಯದಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವಂತೆ ಹೋಟೆಲ್, ಬಾರ್ ಮಾಲೀಕರು, ಉದ್ಯಮಿಗಳ ಸಂಘ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದು ಈ ಕುರಿತಾಗಿ ಶುಕ್ರವಾರ ರಾಜ್ಯ ಸರ್ಕಾರದ ಸಭೆ ನಡೆಯಲಿದೆ. ಈವರೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳ್ಳುವ ಬಗ್ಗೆ ಒಂಚೂರು ಬಾಯ್ಬಿಡದ ಆರೋಗ್ಯ ಸಚಿವ ಕೆ. ಸುಧಾಕರ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Weekend Curfew ರದ್ದಿಗೆ ಬಿಗಿಪಟ್ಟು: ಚಿತ್ರ ಪ್ರದರ್ಶನ ರದ್ದು
ಈ ಕುರಿತಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, "ಇನ್ನೂ 24 ಗಂಟೆಗಳಿವೆ ಕಾಯಿರಿ, ಜನರಿಗೆ ತೊಂದರೆ ಕೊಡುವ ಯಾವ ಉದ್ದೇಶವೂ ಸರ್ಕಾರಕ್ಕೆ ಇಲ್ಲ. ಜನರ ಆರೋಗ್ಯದ ದೃಷ್ಟಿಯಲ್ಲಿ ನಾಳೆ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇವೆ. ಜನರಿಗೆ ತೊಂದರೆ ಕೊಡುವುದರಿಂದ ಸರ್ಕಾರಕ್ಕೆ ಲಾಭವೂ ಇಲ್ಲ, ನಷ್ಟವೂ ಇಲ್ಲ' ಎಂದು ಹೇಳಿದ್ದಾರೆ. ರಾಜ್ಯ ಬಿಜೆಪಿಯ ಸಚಿವರು ಹಾಗೂ ಶಾಸಕರು ಕೂಡ ವೀಕೆಂಡ್ ಕರ್ಫ್ಯೂ ತೆಗೆಯುವುದು ಸೂಕ್ತ ಎಂದು ಹೇಳಿದ್ದಾರೆ. ಇದರಿಂದಾಗಿ ರಾಜ್ಯದ ಜನರಿಗೆ ಶುಭ ಶುಕ್ರವಾರವಾಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!