ಚನ್ನಪಟ್ಟಣದ ಚೆಕ್‌ಮೇಟ್, ಸಿಪಿ ಯೋಗೇಶ್ವರ್‌ ರಾಜೀನಾಮೆಗೆ ಬಿಜೆಪಿ ಕಂಗಾಲು!

Oct 21, 2024, 11:44 PM IST

ಚನ್ನಪಟ್ಟಣದ ಕಗ್ಗಂಟು ಹೆಚ್ಚಾಗಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಸಿಪಿ ಯೋಗೇಶ್ವರ್ ಕನಸಿಗೆ ಕೊಳ್ಳಿ ಇಡುವ ಸಾಧ್ಯತೆ ದಟ್ಟವಾಗಿದೆ. ಉಪ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿ 2 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದೆ. ಆದರೆ ಚನ್ನಪಟ್ಟಣದಲ್ಲಿ ಮಾತ್ರ ಅಭ್ಯರ್ಥಿ ಫೈನಲ್ ಆಗಿಲ್ಲ. ಸಿಪಿ ಯೋಗೇಶ್ವರ್ ಪ್ರಬಲ ಆಕಾಂಕ್ಷಿಯಾಗಿದ್ದರೆ, ಇತ್ತ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪ್ರಬಲ ಕ್ಷೇತ್ರ ಇದಾಗಿದೆ. ಆದರೆ ಮೈತ್ರಿ ಧರ್ಮಾ ಪಾಲನೆಯಿಂದಾಗಿ ಈ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ ನಿಚ್ಚಳವಾಗಿದೆ. ಇದರ ಬೆನ್ನಲ್ಲೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯನ್ನು ಕಂಗಾಲು ಮಾಡಿದೆ.