ಒಂದೂವರೆ ತಿಂಗಳ ಬಳಿಕ ದಸರಾ ಆನೆಗಳು ಕಾಡಿಗೆ : ಪೂಜೆ ಸಲ್ಲಿಸಿ ಬೀಳ್ಕೊಟ್ಟ ಅರಮನೆ ಆಡಳಿತ ಮಂಡಳಿ

ಒಂದೂವರೆ ತಿಂಗಳ ಬಳಿಕ ದಸರಾ ಆನೆಗಳು ಕಾಡಿಗೆ : ಪೂಜೆ ಸಲ್ಲಿಸಿ ಬೀಳ್ಕೊಟ್ಟ ಅರಮನೆ ಆಡಳಿತ ಮಂಡಳಿ

Published : Oct 27, 2023, 11:54 AM IST

ವಿಶ್ವವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ. ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಯಾಗಿ ನಿಭಾಯಿಸಿದ ದಸರಾ ಗಜಪಡೆ ಇಂದು ನಾಡಿನಿಂದ ಕಾಡಿನತ್ತ ಪ್ರಯಾಣ ಬೆಳೆಸಿವೆ. ಕಾಡಿಗೆ ಹೊರಟ ಆನೆಗಳಿಗೆ ಜಿಲ್ಲಾಡಳಿತದಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡಲಾಯ್ತು. ಒಲ್ಲದ ಮನಸಿನಲ್ಲೇ ಗಜಪಡೆಗಳು ಕಾಡಿನತ್ತ ಮುಖ ಮಾಡಿದವು.

ಕುಂಬಳಕಾಯಿ ಆರತಿ ಎತ್ತಿ ಆನೆಗಳಿಗೆ ವಿಶೇಷ ಪೂಜೆ. ಸೊಂಡಿಲೆತ್ತಿ ಸಲಾಮು ಹೇಳಿದ ದಸರಾ(Dasara) ಗಜಪಡೆ.. ಬಳಿಕ ಸಲೀಸಾಗಿ ಲಾರಿ ಹತ್ತಿದ ಆನೆಗಳು, ಎಲ್ಲರ ಮುಖದಲ್ಲೂ ಬೇಸರ... ಇದು  ಮೈಸೂರು(Mysore) ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಬೀಳ್ಕೊಟ್ಟ ಸನ್ನಿವೇಶದ ಚಿತ್ರಣ. ಕಳೆದ ಒಂದೂವರೆ ತಿಂಗಳಿಂದ ಅರಮನೆ ಅಂಗಳದಲ್ಲೇ ದಸರಾ ಆನೆಗಳು(Elephants) ಬೀಡಿ ಬಿಟ್ಟಿದ್ವು.. ತಿಂಗಳುಗಳ ಕಾಲ ತಾಲೀಮು ನಡೆಸಿ, ಅಂತಿಮವಾಗಿ ಜಂಬೂಸವಾರಿ ಯಶಸ್ವಿಗೊಳಿಸಿ ಮೈಸೂರು ದಸರಾ ಸಂಭ್ರಮ ಹೆಚ್ಚಿಸಿವೆ.. ಜಂಬೂಸವಾರಿ ಪೂರ್ಣಗೊಳಿಸಿ ಒಂದು ದಿನ ವಿಶ್ರಾಂತಿ ಪಡೆದ ಬಳಿಕ ನಿನ್ನೆ ದಸರಾ ಆನೆಗಳು ನಾಡಿನಿಂದ ಕಾಡಿನತ್ತ ಹೊರಟವು... ಅದಕ್ಕೂ ಮುನ್ನ ಗಜಪಡೆಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಯ್ತು. ಪುರೋಹಿತರಾದ ಪ್ರಹ್ಲಾದ್, ಡಿಸಿ ಡಾ.ಕೆ.ವಿ ರಾಜೇಂದ್ರ, ಡಿಸಿಎಫ್ ಸೌರಬ್ ಕುಮಾರ್ ,ಪಶು ವೈದ್ಯ ಮುಜೀಬ್ ನೇತೃತ್ವದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಲಾಯ್ತು. ಪೂಜೆ ನಂತರ ಆನೆಗಳು ಮತ್ತಿಗೋಡು, ರಾಮಪುರ, ದುಬಾರೆ ಶಿಬಿರಗಳಿಗೆ ಪ್ರಯಾಣ ಬೆಳೆಸಿದವು. ಆನೆ ಜೊತೆಗೆ ಬಂದಿದ್ದ ಮಾವುತ ಕಾವಾಡಿಗಳಿಗೆ ಅರಮನೆ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಬೀಳ್ಕೊಡಲಾಯ್ತು. ಈ ಬಾರಿ ಅಭಿಮನ್ಯು ನೇತೃತ್ವದ 14 ಆನೆಗಳನ್ನು ಜಂಬೂಸವಾರಿಗೆ ಕರೆತರಲಾಗಿತ್ತು. ಅಭಿಮನ್ಯು, ಭೀಮಾ, ಅರ್ಜುನ, ಕಂಜನ್, ವಿಜಯ, ವರಲಕ್ಷ್ಮೀ, ಗೋಪಿ, ಸುಗ್ರೀವ, ಧನಂಜಯ, ಹಿರಣ್ಯ, ರೋಹಿತ್, ಪ್ರಶಾಂತ್, ಮಹೇಂದ್ರ, ಲಕ್ಷ್ಮೀ ಆನೆಗಳು ಜಂಬೂಸವಾರಿ ಯಶಸ್ವಿಗೊಳಿಸಿ ಮರಳಿ ತಮ್ಮ ಕ್ಯಾಂಪ್ಗೆ ತೆರಳಿದ್ವು‌. ಮರಳಿ ಕಾಡಿನತ್ತ ಹೊರಟ ದಸರಾ ಆನೆಗಳಿಗೆ ಭಾರದ ಮನಸ್ಸಿನಲ್ಲೇ ಕಳುಹಿಸಿಕೊಡಲಾಯ್ತು.

ಇದನ್ನೂ ವೀಕ್ಷಿಸಿ:  ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ: ಒಣಗಿ ನಿಂತ ಭತ್ತದ ಬೆಳೆ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more