Karnataka Covid Crisis : ಲಾಕ್ ಡೌನ್ ಮಾಡುವ ಬದಲು ಸರ್ಕಾರ ಜನರಿಗೆ  ವಿಷ ಕೊಟ್ಟು ಬಿಡಲಿ

Karnataka Covid Crisis : ಲಾಕ್ ಡೌನ್ ಮಾಡುವ ಬದಲು ಸರ್ಕಾರ ಜನರಿಗೆ ವಿಷ ಕೊಟ್ಟು ಬಿಡಲಿ

Suvarna News   | Asianet News
Published : Jan 06, 2022, 11:25 AM IST

 'ಲಾಕ್ ಡೌನ್ ಮಾಡುವ ಬದಲು ಸರ್ಕಾರ ಜನರಿಗೆ  ವಿಷ ಕೊಟ್ಟು ಕೊಂದು ಬಿಡಲಿ ಎಂದು ಸರ್ಕಾರದ ವೀಕೆಂಡ್ ಕರ್ಫ್ಯೂ, 50-50 ನಿಯಮದ ವಿರುದ್ಧ ಮಂಗಳೂರಿನಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಮಗೆ ತಿನ್ನೋಕೆ ಗತಿ ಇಲ್ಲ, ನಾವೆಲ್ಲ ದುಡಿದು ತಿನ್ನೋರು. ಸಾಲಗಳು, ಬ್ಯಾಂಕ್ ಕಿರಿಕಿರಿಯಿಂದ ಜನ ಒದ್ದಾಡುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ದೀಪು ಶೆಟ್ಟಿಗಾರ್ ಅಸಮಾಧಾನ  ಹೊರಹಾಕಿದ್ದಾರೆ. 

ಬೆಂಗಳೂರು (ಜ.06):  'ಲಾಕ್ ಡೌನ್ (Lockdown) ಮಾಡುವ ಬದಲು ಸರ್ಕಾರ ಜನರಿಗೆ  ವಿಷ ಕೊಟ್ಟು ಕೊಂದು ಬಿಡಲಿ ಎಂದು ಸರ್ಕಾರದ ವೀಕೆಂಡ್ ಕರ್ಫ್ಯೂ, 50-50 ನಿಯಮದ ವಿರುದ್ಧ ಮಂಗಳೂರಿನಲ್ಲಿ (Mangaluru) ಆಕ್ರೋಶ ವ್ಯಕ್ತವಾಗಿದೆ. ನಮಗೆ ತಿನ್ನೋಕೆ ಗತಿ ಇಲ್ಲ, ನಾವೆಲ್ಲ ದುಡಿದು ತಿನ್ನೋರು. ಸಾಲಗಳು, ಬ್ಯಾಂಕ್ (Bank) ಕಿರಿಕಿರಿಯಿಂದ ಜನ ಒದ್ದಾಡುತ್ತಿದ್ದಾರೆ. ದುಡಿಯುವ ಜನ ಸಾಯುವ ಪರಿಸ್ಥಿತಿ ಇದೆ, ಸಾಲದ ಕಿರಿಕಿರಿ ಮತ್ತು ತಿನ್ನೋಕೆ ಇಲ್ಲದಂತ ಸ್ಥಿತಿ ಎದುರಾಗುತ್ತಿದೆ.  ಲಾಕ್ ಡೌನ್ (Lockdown) ಮಾಡುವ ಬದಲು ಸರ್ಕಾರ ಜನರಿಗೆ  ವಿಷ ಕೊಟ್ಟು ಬಿಡಲಿ ಎಂದು ಸಾಮಾಜಿಕ ಹೋರಾಟಗಾರ ದೀಪು ಶೆಟ್ಟಿಗಾರ್ ಆಕ್ರೋಶ ಹೊರಹಾಕಿದ್ದಾರೆ. 

Uttara Kannada: ಹೊರ ರಾಜ್ಯದಿಂದ ಬರುವವರಿಗೆ ನೆಗೆಟಿವ್‌ ವರದಿ ಕಡ್ಡಾಯ

ಇವರು ರೋಗವನ್ನು ರಾಜಕಾರಣಿಯ (Politician) ಕುಟುಂಬದ ದೆವ್ವದ ಹಾಗೆ ಮಾಡಿದ್ದಾರೆ.  ಇವರಿಗೆ ಇಷ್ಟ ಬಂದಾಗ ರೋಗ ಹೊರಗೆ ಬರೋದು ಆಗುತ್ತಿದೆ.  ಎಲೆಕ್ಷನ್ (Election) ಇರುವಾಗ ರೋಗ ಇಲ್ಲ, ಮುಗಿದ ಮೇಲೆ ಬರುತ್ತದೆ.   ಮನುಷ್ಯ ಟೆನ್ಶನ್ ನಿಂದ ಸಾಯುತ್ತಿದ್ದಾನೆ. ಕೊರೋನಾಗೆ (Corona) ಮದ್ದು ಇರಬಹುದು, ಟೆನ್ಶನ್ ಗೆ ಇಲ್ಲ.  ನೀವು ಕೋಟಿ ಗಟ್ಟಲೇ ಮಾಡಿಟ್ಟದ್ದು ಇದೆ, ನಮಗೆ ಕೆಲಸಕ್ಕೆ ಹೋದರೆ ಮಾತ್ರ ಮನೆ ನಡೆಯುತ್ತದೆ. ಇವರು ಹತ್ತು ವರ್ಷ ಬಂದ್ ಮಾಡಿದರು ಬದುಕುವಷ್ಟು ಮಾಡಿಟ್ಟಿದ್ದಾರೆ.  ರೋಗದ ಪ್ರಾಬಲ್ಯತೆಗಿಂತ ಇಲ್ಲಿ ದೊಡ್ಡ ಮಾಫಿಯಾ ಕೆಲಸ ಮಾಡುತ್ತಿದೆ.  ಈ ರೋಗ ಇರೋದು ಆಸ್ಪತ್ರೆಯಲ್ಲಿ ಮಾತ್ರ, ಆಸ್ಪತ್ರೆಗೆ ಹೋದವರಿಗೆಲ್ಲಾ ಕೊರೋನಾ. ಹೀಗಾಗಿ ಮೆಡಿಕಲ್ ಮಾಫಿಯಾ ಇದೆ, ಈ ಬಗ್ಗೆ ಸರ್ಕಾರ ಗಮನಿಸಲಿ ಎಂದು ಅಸಮಾಧಾನ ಹೊರಹಾಕಲಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!