MLC Elections:  ರೇವಣ್ಣ 2 ನೇ ಪುತ್ರ ಅಖಾಡಕ್ಕೆ,  JDS ಅಲ್ಲ 'JDF' ಎಂದು ಸಿದ್ದು ಲೇವಡಿ!

MLC Elections: ರೇವಣ್ಣ 2 ನೇ ಪುತ್ರ ಅಖಾಡಕ್ಕೆ, JDS ಅಲ್ಲ 'JDF' ಎಂದು ಸಿದ್ದು ಲೇವಡಿ!

Published : Nov 22, 2021, 01:32 PM ISTUpdated : Nov 22, 2021, 01:39 PM IST

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್‌ ರೇವಣ್ಣ  ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಾಸನದಿಂದ ಕಣಕ್ಕಿಳಿದಿದ್ದಾರೆ. 

ಬೆಂಗಳೂರು (ನ. 21): ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ (HD Devegowda) ಕುಟುಂಬದ ಮತ್ತೊಂದು ಕುಡಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್‌ ರೇವಣ್ಣ  (Sooraj Revanna) ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಾಸನದಿಂದ  (Hassan) ಕಣಕ್ಕಿಳಿದಿದ್ದಾರೆ. ಇದರೊಂದಿಗೆ ದೇವೇಗೌಡರ ಕುಟುಂಬದ 8ನೇ ವ್ಯಕ್ತಿ ರಾಜಕೀಯಕ್ಕೆ ಪ್ರವೇಶಿಸಿದಂತಾಗಿದೆ. ಅಲ್ಲದೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಕುಟುಂಬದ ಎಲ್ಲರೂ ರಾಜಕೀಯಕ್ಕೆ ಪ್ರವೇಶಿಸಿದಂತಾಗಿದೆ.

ಮಾಜಿ ಪ್ರಧಾನಿ ದೇವೇಗೌಡರು ಇಳಿ ವಯಸ್ಸಿನಲ್ಲೂ ರಾಜಕೀಯದಲ್ಲಿ (Politics)  ಸಕ್ರಿಯರಾಗಿದ್ದಾರೆ. ಅವರ ಪುತ್ರರೂ ರಾಜಕೀಯ ಕಣದಲ್ಲಿದ್ದಾರೆ. ಎಚ್‌.ಡಿ.ರೇವಣ್ಣ ರಾಜಕೀಯದಲ್ಲಿದ್ದಾರೆ. ಇನ್ನು ಅವರ ಪತ್ನಿ ಭವಾನಿ ರೇವಣ್ಣ ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿದ್ದರು. ಎರಡನೇ ಪುತ್ರ ಪ್ರಜ್ವಲ್‌ ರೇವಣ್ಣ ಹಾಸನದಿಂದ ಸಂಸದರಾಗಿದ್ದರೆ, ಈಗ ಸೂರಜ್‌ ವಿಧಾನ ಪರಿಷತ್‌ ಚುನಾವಣೆಗೆ ಕಣಕ್ಕಿಳಿಯುವ ಮೂಲಕ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. 

ಗೌಡರ ಕುಟುಂಬ ರಾಜಕಾರಣಕ್ಕೆ ಇತರ ರಾಜಕೀಯ ನಾಯಕರು ವ್ಯಂಗ್ಯವಾಡಿದ್ದಾರೆ. 'ಇಡೀ ದೇಶದಲ್ಲಿ ಒಂದೇ ಕುಟುಂಬದ ಎಂಟು ಜನರು ರಾಜಕಾರಣದಲ್ಲಿರುವ ಏಕೈಕ ಕುಟುಂಬವೆಂದರೆ ಅದುವೇ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ' ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಛೇಡಿಸಿದ್ದಾರೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?