MLC Elections:  ರೇವಣ್ಣ 2 ನೇ ಪುತ್ರ ಅಖಾಡಕ್ಕೆ,  JDS ಅಲ್ಲ 'JDF' ಎಂದು ಸಿದ್ದು ಲೇವಡಿ!

MLC Elections: ರೇವಣ್ಣ 2 ನೇ ಪುತ್ರ ಅಖಾಡಕ್ಕೆ, JDS ಅಲ್ಲ 'JDF' ಎಂದು ಸಿದ್ದು ಲೇವಡಿ!

Published : Nov 22, 2021, 01:32 PM ISTUpdated : Nov 22, 2021, 01:39 PM IST

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್‌ ರೇವಣ್ಣ  ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಾಸನದಿಂದ ಕಣಕ್ಕಿಳಿದಿದ್ದಾರೆ. 

ಬೆಂಗಳೂರು (ನ. 21): ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ (HD Devegowda) ಕುಟುಂಬದ ಮತ್ತೊಂದು ಕುಡಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್‌ ರೇವಣ್ಣ  (Sooraj Revanna) ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಾಸನದಿಂದ  (Hassan) ಕಣಕ್ಕಿಳಿದಿದ್ದಾರೆ. ಇದರೊಂದಿಗೆ ದೇವೇಗೌಡರ ಕುಟುಂಬದ 8ನೇ ವ್ಯಕ್ತಿ ರಾಜಕೀಯಕ್ಕೆ ಪ್ರವೇಶಿಸಿದಂತಾಗಿದೆ. ಅಲ್ಲದೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಕುಟುಂಬದ ಎಲ್ಲರೂ ರಾಜಕೀಯಕ್ಕೆ ಪ್ರವೇಶಿಸಿದಂತಾಗಿದೆ.

ಮಾಜಿ ಪ್ರಧಾನಿ ದೇವೇಗೌಡರು ಇಳಿ ವಯಸ್ಸಿನಲ್ಲೂ ರಾಜಕೀಯದಲ್ಲಿ (Politics)  ಸಕ್ರಿಯರಾಗಿದ್ದಾರೆ. ಅವರ ಪುತ್ರರೂ ರಾಜಕೀಯ ಕಣದಲ್ಲಿದ್ದಾರೆ. ಎಚ್‌.ಡಿ.ರೇವಣ್ಣ ರಾಜಕೀಯದಲ್ಲಿದ್ದಾರೆ. ಇನ್ನು ಅವರ ಪತ್ನಿ ಭವಾನಿ ರೇವಣ್ಣ ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿದ್ದರು. ಎರಡನೇ ಪುತ್ರ ಪ್ರಜ್ವಲ್‌ ರೇವಣ್ಣ ಹಾಸನದಿಂದ ಸಂಸದರಾಗಿದ್ದರೆ, ಈಗ ಸೂರಜ್‌ ವಿಧಾನ ಪರಿಷತ್‌ ಚುನಾವಣೆಗೆ ಕಣಕ್ಕಿಳಿಯುವ ಮೂಲಕ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. 

ಗೌಡರ ಕುಟುಂಬ ರಾಜಕಾರಣಕ್ಕೆ ಇತರ ರಾಜಕೀಯ ನಾಯಕರು ವ್ಯಂಗ್ಯವಾಡಿದ್ದಾರೆ. 'ಇಡೀ ದೇಶದಲ್ಲಿ ಒಂದೇ ಕುಟುಂಬದ ಎಂಟು ಜನರು ರಾಜಕಾರಣದಲ್ಲಿರುವ ಏಕೈಕ ಕುಟುಂಬವೆಂದರೆ ಅದುವೇ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ' ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಛೇಡಿಸಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!