MLC Elections:  ರೇವಣ್ಣ 2 ನೇ ಪುತ್ರ ಅಖಾಡಕ್ಕೆ,  JDS ಅಲ್ಲ 'JDF' ಎಂದು ಸಿದ್ದು ಲೇವಡಿ!

MLC Elections: ರೇವಣ್ಣ 2 ನೇ ಪುತ್ರ ಅಖಾಡಕ್ಕೆ, JDS ಅಲ್ಲ 'JDF' ಎಂದು ಸಿದ್ದು ಲೇವಡಿ!

Published : Nov 22, 2021, 01:32 PM ISTUpdated : Nov 22, 2021, 01:39 PM IST

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್‌ ರೇವಣ್ಣ  ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಾಸನದಿಂದ ಕಣಕ್ಕಿಳಿದಿದ್ದಾರೆ. 

ಬೆಂಗಳೂರು (ನ. 21): ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ (HD Devegowda) ಕುಟುಂಬದ ಮತ್ತೊಂದು ಕುಡಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್‌ ರೇವಣ್ಣ  (Sooraj Revanna) ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಾಸನದಿಂದ  (Hassan) ಕಣಕ್ಕಿಳಿದಿದ್ದಾರೆ. ಇದರೊಂದಿಗೆ ದೇವೇಗೌಡರ ಕುಟುಂಬದ 8ನೇ ವ್ಯಕ್ತಿ ರಾಜಕೀಯಕ್ಕೆ ಪ್ರವೇಶಿಸಿದಂತಾಗಿದೆ. ಅಲ್ಲದೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಕುಟುಂಬದ ಎಲ್ಲರೂ ರಾಜಕೀಯಕ್ಕೆ ಪ್ರವೇಶಿಸಿದಂತಾಗಿದೆ.

ಮಾಜಿ ಪ್ರಧಾನಿ ದೇವೇಗೌಡರು ಇಳಿ ವಯಸ್ಸಿನಲ್ಲೂ ರಾಜಕೀಯದಲ್ಲಿ (Politics)  ಸಕ್ರಿಯರಾಗಿದ್ದಾರೆ. ಅವರ ಪುತ್ರರೂ ರಾಜಕೀಯ ಕಣದಲ್ಲಿದ್ದಾರೆ. ಎಚ್‌.ಡಿ.ರೇವಣ್ಣ ರಾಜಕೀಯದಲ್ಲಿದ್ದಾರೆ. ಇನ್ನು ಅವರ ಪತ್ನಿ ಭವಾನಿ ರೇವಣ್ಣ ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿದ್ದರು. ಎರಡನೇ ಪುತ್ರ ಪ್ರಜ್ವಲ್‌ ರೇವಣ್ಣ ಹಾಸನದಿಂದ ಸಂಸದರಾಗಿದ್ದರೆ, ಈಗ ಸೂರಜ್‌ ವಿಧಾನ ಪರಿಷತ್‌ ಚುನಾವಣೆಗೆ ಕಣಕ್ಕಿಳಿಯುವ ಮೂಲಕ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. 

ಗೌಡರ ಕುಟುಂಬ ರಾಜಕಾರಣಕ್ಕೆ ಇತರ ರಾಜಕೀಯ ನಾಯಕರು ವ್ಯಂಗ್ಯವಾಡಿದ್ದಾರೆ. 'ಇಡೀ ದೇಶದಲ್ಲಿ ಒಂದೇ ಕುಟುಂಬದ ಎಂಟು ಜನರು ರಾಜಕಾರಣದಲ್ಲಿರುವ ಏಕೈಕ ಕುಟುಂಬವೆಂದರೆ ಅದುವೇ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ' ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಛೇಡಿಸಿದ್ದಾರೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!