ಧರ್ಮದ ನಾಡು ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆ!

ಧರ್ಮದ ನಾಡು ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆ!

Published : Oct 29, 2023, 10:25 AM IST

ನಾವು ಧರ್ಮವನ್ನು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂಬ ಮಾತಿದೆ. ಸದಾ ಧಾರ್ಮಿಕ ಕಾಯಕಗಳಿಂದ ಪ್ರಸಿದ್ಧಿ ಪಡೆದಿರುವ ಶ್ರೀಕ್ಷೇತ್ರ ಧರ್ಮಸ್ಥಳ ಇದೀಗ ಮತ್ತೊಂದು ಐತಿಹಾಸಿಕ ಧರ್ಮ ಸಂರಕ್ಷಣಾ ಯಾತ್ರೆಗೆ ಸಜ್ಜಾಗುತ್ತಿದೆ. 
 

ಧರ್ಮ ಸಂರಕ್ಷಣೆಯ ಪಣ ತೊಟ್ಟ ಧರ್ಮ ಸೈನಿಕರು ಮಂಜುನಾಥನ ಸನ್ನಿಧಿಗೆ ಪಾದಯಾತ್ರೆ ನಡೆಸಿ ಈ ಮಣ್ಣಿನ ಕೀರ್ತಿಯ ರಕ್ಷಣೆಗೆ ಪಣ ತೊಟ್ಟಿದ್ದಾರೆ. ರಥಯಾತ್ರೆ ಮೂಲಕ ಕ್ಷೇತ್ರದ ಧರ್ಮ ರಕ್ಷಣೆಯ ಕಹಳೆ ಸಾವಿರಾರು ಸಂಖ್ಯೆಯಲ್ಲಿ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಂದೇಶ ಮೊಳಗಲಿದೆ. ಶ್ರೀ ವೀರೇಂದ್ರ ಹೆಗ್ಗಡೆಯವರು(Veerendra Heggade) ಈ ರಥಯಾತ್ರೆಯನ್ನ ಸ್ವಾಗತಿಸಲಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕೆಯ(Sri Mookambike) ಸನ್ನಿಧಿಯಿಂದ ಹೊರಟಿರುವ ಧರ್ಮ ಸಂರಕ್ಷಣಾ ರಥವೂ(Dharma Samrakshana Ratha ಇಂದು ಪೊಡವಿಗೋಡೆಯನ ಊರು ಶ್ರೀ ಕೃಷ್ಣನಗರಿ ಉಡುಪಿಯನ್ನ ತಲುಪಿದ್ದು, ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತ ಸ್ತೋಮದಿಂದ ಧರ್ಮ ಸಂರಕ್ಷಣ ರಥಕ್ಕೆ ಅಭೂತಪೂರ್ವ ಸ್ವಾಗತ ದೊರೆತಿದೆ. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಮಹಿಳಾ ಭಕ್ತಾದಿಗಳು ಆರತಿ ಎತ್ತುವ ಮೂಲಕ ಧರ್ಮ ರಥವನ್ನ ಸ್ವಾಗತಿಸಿದ್ದಾರೆ. ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಿಂದ (Manjunath Swamy Temple)ಹೊರಟು ಮಧ್ಯಾಹ್ನ 1:30ಕ್ಕೆ ಉಜಿರೆ ತಲುಪಲಿದ್ದು, ಬಳಿಕ 3 ಗಂಟೆಗೆ ಉಜಿರೆಯಿಂದ ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಪಾದಯಾತ್ರೆಯ ಮೂಲಕ ಸಂಜೆ 5 ಗಂಟೆ ಸುಮಾರಿಗೆ ಧರ್ಮಸ್ಥಳ ತಲುಪಲಿದೆ. ಈ ಧರ್ಮ ಸಂರಕ್ಷಣಾ ಪಾದಯಾತ್ರೆಯಲ್ಲಿ ನಾಡಿನ ಪ್ರಸಿದ್ಧ ಸಂತರು, ಜನಪ್ರತಿನಿಧಿಗಳು ಸೇರಿದಂತೆ ಹಲವು ಜನರು ಭಾಗಿಯಾಗಲಿದ್ದಾರೆ. ನಾಡಿನ ವಿವಿಧ ಭಾಗಗಳಿಂದ ಭಕ್ತ ಸ್ತೋಮವೇ ಧರ್ಮ ಸಂರಕ್ಷಣೆಯ ಯಾತ್ರೆಗೆ ಸಜ್ಜಾಗುತ್ತಿದ್ದು ಧರ್ಮಸ್ಥಳದಲ್ಲಿ ನಡೆಯುವ ಈ ರಥ ಯಾತ್ರೆ ಸಾಕಷ್ಟು ನಿರೀಕ್ಷೆ ಕುತೂಹಲಗಳನ್ನ ಸೃಷ್ಟಿಸಿದೆ.

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರಿಗೆ ಪ್ರೇಮದ ವಿಚಾರದಲ್ಲಿ ಬೇಸರವಾಗಲಿದ್ದು, 12 ರಾಶಿಗಳ ಭವಿಷ್ಯ ಹೀಗಿದೆ..

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more