ಧರ್ಮಸ್ಥಳದ ವಿರೋಧಿ ಷಡ್ಯಂತ್ರ.. ಸಮೀರ್ ಮನೆಯ ಮೇಲೆ ದಾಳಿ! ಪೊಲೀಸರಿಗೆ ಸಿಕ್ಕಿದ್ದೇನು?

ಧರ್ಮಸ್ಥಳದ ವಿರೋಧಿ ಷಡ್ಯಂತ್ರ.. ಸಮೀರ್ ಮನೆಯ ಮೇಲೆ ದಾಳಿ! ಪೊಲೀಸರಿಗೆ ಸಿಕ್ಕಿದ್ದೇನು?

Published : Sep 05, 2025, 11:25 AM IST

ಬೆಳ್ತಂಗಡಿ ಪೊಲೀಸರು ಯುಟ್ಯೂಬರ್ ಸಮೀರ್ ಅವರ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಯುಟ್ಯೂಬರ್ ಸಮೀರ್ ಅವರ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬುಧವಾರ ಬೆಳ್ತಂಗಡಿ ನ್ಯಾಯಾಲಯ ಹೊರಡಿಸಿದ ಸರ್ಚ್ ವಾರಂಟ್ ಅಡಿಯಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದರು. ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ, ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಹುಲ್ಲಹಳ್ಳಿಯಲ್ಲಿರುವ ಆತನ ಬಾಡಿಗೆ ಮನೆಗೆ ಭೇಟಿ ನೀಡಿ, ಮಹಜರು ನಡೆಸಿದರು. ಪೊಲೀಸರು ಮುಂಚಿತವಾಗಿಯೇ ಸಮೀರ್‌ಗೆ ಮಹಜರು ಪ್ರಕ್ರಿಯೆಗೆ ಆಗಮಿಸುವುದಾಗಿ ಮಾಹಿತಿ ನೀಡಿದ್ದರು.

ಹೀಗಾಗಿ, ಆತ ಮನೆಯಲ್ಲಿಯೇ ಇದ್ದ. ಜೊತೆಗೆ, ಗಿರೀಶ್ ಮಟ್ಟಣ್ಣವರ್ ಕೂಡ ಇದ್ದರು. ಸ್ಥಳ ಮಹಜರು ನಡೆಸಿದ ಪೊಲೀಸರು, ಅದರ ವಿಡಿಯೋ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿ ತೆರಳಿದರು. ನಂತರ ಗಿರೀಶ್ ಮಟ್ಟಣ್ಣವರ್ ಮಾತನಾಡಿ, ಇದು ಪೊಲೀಸ್ ರೇಡ್ ಅಲ್ಲ. ಧರ್ಮಸ್ಥಳ ಕೇಸ್‌ನ ವಿಚಾರಣೆಯೂ ಅಲ್ಲ. ‘ಧರ್ಮಸ್ಥಳ ದಣಿಗಳ ಚಾಟೂ (ಗುಲಾಮರು)ಗಳು’ ಎಂದು ಎಐ ವಿಡಿಯೋದಲ್ಲಿ ಬಳಸಿದ ಒಂದು ಶಬ್ದವನ್ನು ಉಲ್ಲೇಖಿಸಿ ಬೆಳ್ತಂಗಡಿ ಪೊಲೀಸರು ಉದ್ದೇಶಪೂರ್ವಕವಾಗಿ ಸುಮೋಟೋ ಕೇಸ್ ದಾಖಲು ಮಾಡಿಕೊಂಡಿದ್ದರು. ಆ ಕೇಸ್‌ನ ಸಂಬಂಧ ಸ್ಥಳ ಮಹಜರು ಮಾಡಿದ್ದಾರೆ ಎಂದರು. ಆದರೆ, ಸಮೀರ್ ಯಾವುದೇ ಪ್ರತಿಕ್ರಿಯೆ ನೀಡದೆ, ಮಟ್ಟಣ್ಣವರ್‌ ಜೊತೆಗೆ ಹೊರಟು ಹೋದರು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more