ಧರ್ಮಸ್ಥಳಕ್ಕೆ ಕರೆದುಕೊಂಡು ಬಂದವರ ಬುಡಕ್ಕೇ ಬೆಂಕಿ ಇಟ್ನಲ್ಲಾ ಅನಾಮಿಕ? ಬುರುಡೆ ಕೊಟ್ಟವರ 3 ಜನರ ಹೆಸರೇಳಿಬಿಟ್ಟ!

ಧರ್ಮಸ್ಥಳಕ್ಕೆ ಕರೆದುಕೊಂಡು ಬಂದವರ ಬುಡಕ್ಕೇ ಬೆಂಕಿ ಇಟ್ನಲ್ಲಾ ಅನಾಮಿಕ? ಬುರುಡೆ ಕೊಟ್ಟವರ 3 ಜನರ ಹೆಸರೇಳಿಬಿಟ್ಟ!

Published : Aug 19, 2025, 03:33 PM IST

ಧರ್ಮಸ್ಥಳದಲ್ಲಿ ನಡೆದ ಉತ್ಖನನದ ಬಗ್ಗೆ SIT ವಿಚಾರಣೆ ನಡೆಸಿದ್ದು, ದೂರುದಾರನು 3 ಹೆಸರುಗಳನ್ನು ಬಹಿರಂಗಪಡಿಸಿದ್ದಾನೆ. ಈ ಬೆಳವಣಿಗೆ ವಿಧಾನಸಭೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ತನಿಖೆಯ ನಂತರದ ಹಂತಗಳು ಚರ್ಚಿಸಲ್ಪಟ್ಟಿವೆ. ಸುಳ್ಳು ಸುದ್ದಿ ಹರಡುವವರ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಯಾವನೋ ಒಬ್ಬ ಬಂದು ದೂರು ಕೊಟ್ಟ ಅಂತ ಸರ್ಕಾರ SIT ರಚನೆ ಮಾಡಿತ್ತು. ಆ SIT ಆತ ತೋರಿಸಿದ ಕಡೆಯಲ್ಲೆಲ್ಲಾ ಜೆಸಿಬಿಯನ್ನ ನುಗ್ಗಿಸಿತು. ಆದ್ರೆ ಸಿಕ್ಕಿದ್ದು ಒಂದಷ್ಟು ಮೂಳೆಗಳು ಬಿಟ್ಟರೆ ಆ ಅನಾಮಿಕನೇ ತಂದಿದ್ದ ಒಂದು ತಲೆಬುರುಡೆ. ಬಂದವನು ಯಾರು..? ಆತ ತಂದ ಬುರುಡೆ ಯಾರದ್ದು ಅಂತ ಒಂದೇ ಒಂದು ಪ್ರಶ್ನೆಯನ್ನೂ ಆತನಿಗೆ ಕೇಳಿರಲಿಲ್ಲ. ಆದ್ರೆ ಈಗ ಧರ್ಮಸ್ಥಳದ ಕಾಡಿನಲ್ಲೆಲ್ಲಾ ಉತ್ಕನನ ಮಾಡಿದ ಮೇಲೆ ಇವತ್ತು ಎಸ್​ಐಟಿ ಅನಾಮಿಕನನ್ನ ಪ್ರಶ್ನೆ ಮಾಡಿತು.

ಆದರೆ, ಅನಾಮಿಕನಿಗೆ ಕೇಳಿದ ಮೊದಲ ಪ್ರಶ್ನೆಗೆ ಆತ ಕೊಟ್ಟ ಉತ್ತರ ಕೇಳಿ ಸ್ವತಃ ಎಸ್‌ಐಟಿ ಅಧಿಕಾರಿಗಳೆ ಥಂಡ ಹೊಡೆದಿದ್ದರು. ಕಾರಣ ಆತ 3 ಹೆಸರುಗಳನ್ನ ಹೆಳಿದ್ದನು. ಅಷ್ಟೇ ಅಲ್ಲ ಅವರು ಹೇಳಿದ್ದಂತೆ ಕೇಳಿದ್ದೇನೆ ಅಷ್ಟೇ ಅಂದಿದ್ದ. ಅಷ್ಟಕ್ಕೂ ಆತ ಹೆಳಿದ ಆ ಮೂವರು ಯಾರು.?  ಈ ಅನಾಮಿಕನನ್ನ ತಂದು ಧರ್ಮಸ್ಥಳದ ವಿರುದ್ಧ ನಿಲ್ಲಿಸಿದ ಆ ಗ್ಯಾಂಗ್​​ ಯಾವುದು? ವಿಚಾರಣೆಯಲ್ಲಿ ಅನಾಮಿಕ ಕೊಟ್ಟ ಶಾಕಿಂಗ್​ ಮಾಹಿತಿಗಳೇ ಇವತ್ತಿನ ಎಫ್​.ಐ.ಆರ್​​.

ದೂರುದಾರನ ಮುಖವಾಡ ಕಳಚಿಬಿದ್ದಿದ್ದು, ಯಾರೋ ಸಂಚುಕೋರರ ಕೈಗೊಂಬೆಯಾಗಿ ಕೆಲಸ ಮಾಡಿದ್ದು ಬಯಲಾಗಿದೆ. ಶ್ರೀ ಕ್ಷೇತ್ರದ ವಿರುದ್ಧ ಷಡ್ಯಂತ್ರ ಹೆಣೆದ ಗ್ಯಾಂಗ್​ ಈಗ ತಾವೇ ತೋಡಿದ ಗುಂಡಿಯೊಳಗೆ ಬಿದ್ದಿದೆ. ಇನ್ನೂ ಇದೇ ಬುರುಡೆ ಕೇಸ್​​​ ವಿಧಾನಸಭೆಯಲ್ಲಿ ಧರ್ಮ ಯುದ್ದವನ್ನೇ ಸೃಷ್ಟಿಸಿಬಿಟ್ಟಿತ್ತು. ಹಾಗಾದರೆ ಇವತ್ತಿನ ಕಲಾಪದಲ್ಲಿ ಏನೆಲ್ಲಾ ಆಯ್ತು..? ಮಾಹಿತಿ ಇಲ್ಲಿದೆ.

ಇಷ್ಟು ದಿನ SIT ಕಾರ್ಯಚರಣೆ ಬಗ್ಗೆ ಸೋಷಿಯಲ್​ ಮೀಡಿಯಾಗಳಲ್ಲಿ ಅಂತೆಕಂತೆಗಳೇ ಹರಿದಾಡಿದ್ದವು. ಅಷ್ಟು ಅಸ್ತಿ ಪಂಜರಗಳು ಸಿಕ್ಕಿದ್ವಂತೆ, ಇಷ್ಟು ಸಿಕ್ಕಿದ್ವಂತೆ ಅಂತ ಅದೊಂದು ವಿರೋಧಿ ಗ್ಯಾಂಗ್​ ಬೇಕಾಬಿಟ್ಟಿ ವಿಡಿಯೋಗಳನ್ನ ಮಾಡಿತ್ತು. ಆದರೆ ಇವತ್ತು ಸರ್ಕಾರ ಕಲಾಪದಲ್ಲೇ ಅಧಿಕೃತವಾಗಿ ತನಿಖೆಯ ಮಾಹಿತಿ ಕೊಟ್ಟಿದೆ. ನಂತರ ತನಿಖೆಯ ಅಪ್​ಡೇಟ್ಸ್​ ಕೂಡ ಬಿಚ್ಚಿಟ್ಟಿದೆ. ಆದರೆ, ತನಿಖೆ ಬಗ್ಗೆ​​ ಸುಳ್ಳು ಸುದ್ದಿ ಹರಡುವವರ ಕಥೆಯನ್ನ ಮಾತ್ರ ಹೇಳಲಿಲ್ಲ. ಇನ್ನೂ ಇದೇ ಕಾರ್ಯಚರಣೆ ಬಗ್ಗೆ ಕಲಾಪದಲ್ಲಿ ಇವತ್ತು ಧರ್ಮಯುದ್ಧವೇ ನಡೆದುಹೊಯ್ತು..

ಗೃಹ ಸಚಿವ ಪರಮೇಶ್ವರ ಹೇಳಿದಂತೆ ತಾತ್ಕಾಲಿಕವಾಗಿ ಗುಂಡಿ ಅಗೆಯೋದನ್ನೇನು ನಿಲ್ಲಿಸಲಾಗಿದೆ. ಆದರೆ, ಇಲ್ಲಿಗೆ ಎಲ್ಲಾ ಮುಗಿದಂತಲ್ಲ, ಇವಾಗಿನಿಂದಲೇ ನೋಡಿ ಅಸಲಿ ಆಟ ಶುರು. ಎಫ್​.ಎಸ್​​.ಎಲ್​ ರಿಪೋರ್ಟ್​ ಬರ್ತಿದ್ದಂತೆ ನಿಜವಾದ ತನಿಖೆ ಆರಂಭವಾಗಲಿದೆ. ಅನಾಮಿಕನ ನಿಜ ಬಣ್ಣ ಬಯಲಾಗಲಿದೆ ಅಂತ ಹೇಳ್ತಾ ಇವತ್ತಿನ ಎಪಿಸೋಡ್​​ ಮುಗಿಸುತ್ತಿದ್ದೇವೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more