ಜಸ್ಟೀಸ್‌ ಫಾರ್‌ ಸೌಜನ್ಯಾ ಕೇಸಿಗೆ ಮಣಿಯುತ್ತಾ ಸರ್ಕಾರ.! ನಾಲ್ವರ ವಿರುದ್ಧ ಮರು ತನಿಖೆ ನಡೆಯುತ್ತಾ.?

ಜಸ್ಟೀಸ್‌ ಫಾರ್‌ ಸೌಜನ್ಯಾ ಕೇಸಿಗೆ ಮಣಿಯುತ್ತಾ ಸರ್ಕಾರ.! ನಾಲ್ವರ ವಿರುದ್ಧ ಮರು ತನಿಖೆ ನಡೆಯುತ್ತಾ.?

Published : Aug 07, 2023, 04:37 PM IST

ಕರ್ನಾಟಕ ಕರಾಳ ಘಟೆಯಾದ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ನಾಲ್ವರ ವಿರುದ್ಧ ಮರು ತನಿಖೆ ಮಾಡುವಂತೆ ಜನರು ಹೋರಾಟ ಆರಂಭಿಸಿದ್ದಾರೆ. ಇದಕ್ಕೆ ಸರ್ಕಾರ ಮಣಿಯುತ್ತಾ ನೋಡಬೇಕಿದೆ. 

ಬೆಂಗಳೂರು (ಆ.07): ಕಳೆದ 11 ವರ್ಷಗಳ ಹಿಂದೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯದಲ್ಲಿ ಮತ್ತೆ ಹೋರಾಟದ ಕಿಚ್ಚು ಹೊತ್ತಿಸಿದೆ. ಆರೋಪಿಯಾಗಿದ್ದ ಸಂತೋಷ್‌ರಾವ್‌ ಅವರನ್ನು ಸಿಬಿಐ ಕೋರ್ಟ್‌ ನಿರ್ದೋಷಿ ಎಂದು ಬಿಡುಗಡೆ ಮಾಡಿದೆ. ಹಾಗಾದರೆ ಸೌಜನ್ಯಾಳನ್ನು ಕೊಂದವರು ಯಾರು ಎಂಬ ಪ್ರಶ್ನೆಗೆ ಈವರೆಗೂ ಉತ್ತರ ಸಿಕ್ಕಿಲ್ಲ. ಮಗಳನ್ನು ಕಳೆದುಕೊಂಡ ಕುಟುಂಬಕ್ಕೆ ಈವರೆಗೂ ನ್ಯಾಯ ಸಿಕ್ಕಿಲ್ಲ. ಮಾನಸಿಕ ಅಸ್ವಸ್ಥರನ್ನು ಈ ಕೇಸ್‌ನಲ್ಲಿ ಸಿಕ್ಕಿಸಲಾಗಿತ್ತು ಎನ್ನುವ ಆರೋಪ ಮಾಡುತ್ತಿರುವ ಜನ ಬೊಟ್ಟು ಮಾಡುತ್ತಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳದತ್ತ ಎನ್ನುವುದು ಈಗಿನ ವಿಚಾರವಾಗಿದೆ. 

ಜನರು ಬೊಟ್ಟು ಮಾಡುತ್ತಿರುವ ವ್ಯಕ್ತಿಗಳು ಯಾರು?:  ಧರ್ಮಸ್ಥಳ ದೇವಸ್ಥಾನದ ಕಚೇರಿ ಸಿಬ್ಬಂದಿ ಮಲ್ಲಿಕ್‌ ಜೈನ್, ಧರ್ಮಸ್ಥಳದ ಆವರಣದಲ್ಲಿನ ಅಂಗಡಿ ಮಾಲೀಕ ಧೀರಜ್‌ ಜೈನ್‌, ಧರ್ಮಸ್ಥಳದಲ್ಲಿ ಆಟೋ ಡ್ರೈವರ್‌ ಆಗಿದ್ದ ಉದಯ್‌ ಜೈನ್‌ ಹಾಗೂ ವೀರೇಂದ್ರ ಹೆಗ್ಗಡೆ ಅವರ ತಮ್ಮನ ಮಗ ನಿಶ್ಚಲ್‌ ಜೈನ್‌ ವಿರುದ್ಧ ಮರುತನಿಖೆಗೆ ಆಗ್ರಹ ವ್ಯಕ್ತವಾಗುತ್ತಿದೆ. ಆದರೆ, ಈ ನಾಲ್ವರ ವಿರುದ್ಧ ಸಿಬಿಐ ಮತ್ತು ಸಿಐಡಿ ತನಿಖೆಯಲ್ಲಿಯೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಆದರೆ, ಜನರು ಈ ನಾಲ್ವರ ವಿರುದ್ಧ ಬೊಟ್ಟು ಮಾಡಿ ಮರು ತನಿಖೆ ಮಾಡುವಂತೆ ಸರ್ಕಾರದ ವಿರುದ್ಧ ಒತ್ತಡ ಹೇರುತ್ತಿದ್ದಾರೆ. ಮತ್ತೊಂದೆಡೆ, ಸೌಜನ್ಯ ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ಎಡವಟ್ಟುಗಳಿಂದ ಪ್ರಕರಣದ ಹಾದಿ ತಪ್ಪಿದೆ ಎಂದು ಆಗ್ರಹಿಸುತ್ತಿದ್ದಾರೆ. ಈಗ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತಿದೆ ಎಂಬುದನ್ನು ಕಾದು ನೋಡಬೇಕಿದೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more